5:54 AM Sunday5 - October 2025
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್

ಇತ್ತೀಚಿನ ಸುದ್ದಿ

ಮಂಗಳೂರು: ಅಗಲಿದ ಹಿರಿಯ ಸಾಹಿತಿ ನಾ ಡಿಸೋಜ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ

08/01/2025, 22:27

ಮಂಗಳೂರು(reporterkarnataka.com):ಕಲ್ಕೂರ ಪ್ರತಿಷ್ಠಾನ ವತಿಯಿಂದ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಹಿರಿಯ ಸಾಹಿತಿ
ನಾ ಡಿಸೋಜ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ನಗರ ಶಾರದಾ ವಿದ್ಯಾಲಯದಲ್ಲಿ ಬುಧವಾರ ನಡೆಯಿತು.

ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಡಾ. ಬಿ.ಎ. ವಿವೇಕ್ ರೈ ಅವರು ಮಾತನಾಡಿ, ನಾ ಡಿಸೋಜ ಅವರು
ಎಲ್ಲಾ ರೀತಿಯ ಜನರಿಗೂ ಬೇಕಾಗಿರುವವರು. ಅವರದ್ದು ಪಕ್ಷ ಬೇಧವಿಲ್ಲದ ವ್ಯಕ್ತಿತ್ವ ಎಂದರು.
ಪ್ರತಿಯೊಂದು ಕಥೆಗಳಲ್ಲಿಯೂ ನಾಡೋಜ ಅವರು
ಮಲೆನಾಡಿನ ಚಿತ್ರಣ,ಭ್ರಷ್ಟಾಚಾರ, ಮಹಿಳೆಯ ಬಗ್ಗೆ ಉಲ್ಲೇಖ ಕಾಣಬಹುದಾಗಿದೆ. ಮಕ್ಕಳ ಸಾಹಿತ್ಯವನ್ನು ಪರಿಚಯಿಸಿದರು. ನಮ್ಮ ಕನ್ನಡ ಶಾಲೆಗಳಲ್ಲಿ ಅವರ ಮಕ್ಕಳ ಸಾಹಿತ್ಯ ಪುಸ್ತಕಗಳನ್ನು ವಿತರಿಸಬೇಕು.ಅನೇಕ ಹೋರಾಟಗಳಲ್ಲಿ ಅವರು ಭಾಗಿದ್ದಾರೆ. ಮಲೆನಾಡಿನ ಎಲ್ಲಾ ಹೋರಾಟಗಳಲ್ಲಿ ಬಾಗಿಯಾಗಿದ್ದಾರೆ.
ಎಂದು ಬಿ.ಎ.ವಿವೇಕ ರೈ ಅವರು ಹೇಳಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಅವರು ಪ್ರಸ್ತಾವಿಸಿದರು. ಶಾರದಾ ಕಾಲೇಜಿನ ಎಂ.ಬಿ. ಪುರಾಣಿಕ್, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಭುವನಾಭಿರಾಮ ಉಡುಪ, ಪುಷ್ಕಳ ಕುಮಾರ್, ಹರೀಶ್ ರೈ, ತಮ್ಮ ಲಕ್ಷ್ಮಣ, ಸುಧಾಕರ ರಾವ್ ಪೇಜಾವರ,ದಯಾನಂದ ಕಟೀಲ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು