7:48 PM Wednesday2 - July 2025
ಬ್ರೇಕಿಂಗ್ ನ್ಯೂಸ್
JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,…

ಇತ್ತೀಚಿನ ಸುದ್ದಿ

ಮಂಗಳೂರು: ಅಗಲಿದ ಹಿರಿಯ ಸಾಹಿತಿ ನಾ ಡಿಸೋಜ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ

08/01/2025, 22:27

ಮಂಗಳೂರು(reporterkarnataka.com):ಕಲ್ಕೂರ ಪ್ರತಿಷ್ಠಾನ ವತಿಯಿಂದ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಹಿರಿಯ ಸಾಹಿತಿ
ನಾ ಡಿಸೋಜ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ನಗರ ಶಾರದಾ ವಿದ್ಯಾಲಯದಲ್ಲಿ ಬುಧವಾರ ನಡೆಯಿತು.

ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಡಾ. ಬಿ.ಎ. ವಿವೇಕ್ ರೈ ಅವರು ಮಾತನಾಡಿ, ನಾ ಡಿಸೋಜ ಅವರು
ಎಲ್ಲಾ ರೀತಿಯ ಜನರಿಗೂ ಬೇಕಾಗಿರುವವರು. ಅವರದ್ದು ಪಕ್ಷ ಬೇಧವಿಲ್ಲದ ವ್ಯಕ್ತಿತ್ವ ಎಂದರು.
ಪ್ರತಿಯೊಂದು ಕಥೆಗಳಲ್ಲಿಯೂ ನಾಡೋಜ ಅವರು
ಮಲೆನಾಡಿನ ಚಿತ್ರಣ,ಭ್ರಷ್ಟಾಚಾರ, ಮಹಿಳೆಯ ಬಗ್ಗೆ ಉಲ್ಲೇಖ ಕಾಣಬಹುದಾಗಿದೆ. ಮಕ್ಕಳ ಸಾಹಿತ್ಯವನ್ನು ಪರಿಚಯಿಸಿದರು. ನಮ್ಮ ಕನ್ನಡ ಶಾಲೆಗಳಲ್ಲಿ ಅವರ ಮಕ್ಕಳ ಸಾಹಿತ್ಯ ಪುಸ್ತಕಗಳನ್ನು ವಿತರಿಸಬೇಕು.ಅನೇಕ ಹೋರಾಟಗಳಲ್ಲಿ ಅವರು ಭಾಗಿದ್ದಾರೆ. ಮಲೆನಾಡಿನ ಎಲ್ಲಾ ಹೋರಾಟಗಳಲ್ಲಿ ಬಾಗಿಯಾಗಿದ್ದಾರೆ.
ಎಂದು ಬಿ.ಎ.ವಿವೇಕ ರೈ ಅವರು ಹೇಳಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಅವರು ಪ್ರಸ್ತಾವಿಸಿದರು. ಶಾರದಾ ಕಾಲೇಜಿನ ಎಂ.ಬಿ. ಪುರಾಣಿಕ್, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಭುವನಾಭಿರಾಮ ಉಡುಪ, ಪುಷ್ಕಳ ಕುಮಾರ್, ಹರೀಶ್ ರೈ, ತಮ್ಮ ಲಕ್ಷ್ಮಣ, ಸುಧಾಕರ ರಾವ್ ಪೇಜಾವರ,ದಯಾನಂದ ಕಟೀಲ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು