11:21 AM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮಂಗಳೂರು: ಅಗಲಿದ ಹಿರಿಯ ಸಾಹಿತಿ ನಾ ಡಿಸೋಜ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ

08/01/2025, 22:27

ಮಂಗಳೂರು(reporterkarnataka.com):ಕಲ್ಕೂರ ಪ್ರತಿಷ್ಠಾನ ವತಿಯಿಂದ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಹಿರಿಯ ಸಾಹಿತಿ
ನಾ ಡಿಸೋಜ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ನಗರ ಶಾರದಾ ವಿದ್ಯಾಲಯದಲ್ಲಿ ಬುಧವಾರ ನಡೆಯಿತು.

ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಡಾ. ಬಿ.ಎ. ವಿವೇಕ್ ರೈ ಅವರು ಮಾತನಾಡಿ, ನಾ ಡಿಸೋಜ ಅವರು
ಎಲ್ಲಾ ರೀತಿಯ ಜನರಿಗೂ ಬೇಕಾಗಿರುವವರು. ಅವರದ್ದು ಪಕ್ಷ ಬೇಧವಿಲ್ಲದ ವ್ಯಕ್ತಿತ್ವ ಎಂದರು.
ಪ್ರತಿಯೊಂದು ಕಥೆಗಳಲ್ಲಿಯೂ ನಾಡೋಜ ಅವರು
ಮಲೆನಾಡಿನ ಚಿತ್ರಣ,ಭ್ರಷ್ಟಾಚಾರ, ಮಹಿಳೆಯ ಬಗ್ಗೆ ಉಲ್ಲೇಖ ಕಾಣಬಹುದಾಗಿದೆ. ಮಕ್ಕಳ ಸಾಹಿತ್ಯವನ್ನು ಪರಿಚಯಿಸಿದರು. ನಮ್ಮ ಕನ್ನಡ ಶಾಲೆಗಳಲ್ಲಿ ಅವರ ಮಕ್ಕಳ ಸಾಹಿತ್ಯ ಪುಸ್ತಕಗಳನ್ನು ವಿತರಿಸಬೇಕು.ಅನೇಕ ಹೋರಾಟಗಳಲ್ಲಿ ಅವರು ಭಾಗಿದ್ದಾರೆ. ಮಲೆನಾಡಿನ ಎಲ್ಲಾ ಹೋರಾಟಗಳಲ್ಲಿ ಬಾಗಿಯಾಗಿದ್ದಾರೆ.
ಎಂದು ಬಿ.ಎ.ವಿವೇಕ ರೈ ಅವರು ಹೇಳಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಅವರು ಪ್ರಸ್ತಾವಿಸಿದರು. ಶಾರದಾ ಕಾಲೇಜಿನ ಎಂ.ಬಿ. ಪುರಾಣಿಕ್, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಭುವನಾಭಿರಾಮ ಉಡುಪ, ಪುಷ್ಕಳ ಕುಮಾರ್, ಹರೀಶ್ ರೈ, ತಮ್ಮ ಲಕ್ಷ್ಮಣ, ಸುಧಾಕರ ರಾವ್ ಪೇಜಾವರ,ದಯಾನಂದ ಕಟೀಲ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು