3:48 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಸೆಕ್ಯುರಿಟಿ ಮತ್ತಷ್ಟು ಟೈಟ್

04/05/2024, 16:47

ಮಂಗಳೂರು(reporterkarnataka.com): ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಹುಸಿ ಇ ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಭದ್ರತೆಯನ್ನು ಇನ್ನಷ್ಟು ತೀವ್ರಗೊಳಿಸಲಾಗಿದೆ.
ವಿಮಾನ ನಿಲ್ದಾಣ ಹಾಗೂ ವಿಮಾನಗಳಲ್ಲಿ ಬಾಂಬ್‌ ಇರಿಸಲಾಗಿದೆ. ಕೆಲವೇ ಗಂಟೆಗಳಲ್ಲಿ ಬಾಂಬ್‌ಗಳು ಸ್ಫೋಟಗೊಳ್ಳಲಿವೆ. ಇದರಿಂದ ದೊಡ್ಡ ರಕ್ತಪಾತವೇ ನಡೆಯಲಿದೆ ಎಂದು ಉಗ್ರರ ಹೆಸರಿನಲ್ಲಿ ಪೊಲೀಸರಿಗೆ ಇಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ.
ಏಪ್ರಿಲ್ 29ರಂದು ಬಾಂಬ್ ಇಟ್ಟಿರುವ ಬಗ್ಗೆ ಬೆದರಿಕೆ ಇಮೇಲ್ ಬಂದಿದ್ದು, ಇಮೇಲ್ ಸಂದೇಶದ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ. ಭಾರತದ 22 ವಿಮಾನ ನಿಲ್ದಾಣಕ್ಕೆ ಈ ತರಹ ಬೆದರಿಕೆ ಸಂದೇಶ ಬಂದಿದೆ.
ಈ ಪ್ರಕರಣದ ತಡವಾಗಿ ಬೆಳಕಿಗೆ ಬಂದಿದೆ. ಬಾಂಬ್ ಬೆದರಿಕೆ ಪ್ರಕರಣವನ್ನು ಪೊಲೀಸರು ಗೌಪ್ಯವಾಗಿಟ್ಟು ವಿಮಾನ ನಿಲ್ದಾಣದಲ್ಲಿ ಬಾಂಬ್ ಪರಿಶೀಲನೆ ಮಾಡಲಾಗಿದೆ. ಇದರೊಂದಿಗೆ ವಿಮಾನ ನಿಲ್ದಾಣದಲ್ಲಿ ಪೊಲೀಸರಿಂದ ಭದ್ರತೆಯನ್ನು ಹೆಚ್ಚಳ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು