4:55 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಮಂಗಳೂರು ಅಲೋಶಿಯಸ್ ಕಾಲೇಜು: ಮತದಾನ ಜಾಗೃತಿಯ ವ್ಯಂಗ್ಯ ಚಿತ್ರಗಳ ಪ್ರದರ್ಶನ

03/04/2023, 22:23

ಮಂಗಳೂರು(reporterkarnataka.com): ಬರುವ ಮೇ.10ರಂದು ನಡೆಯಲಿರುವ
ವಿಧಾನ ಸಭಾ ಚುನಾವಣಾ ಮತದಾನದಲ್ಲಿ ಜಿಲ್ಲೆಯ ಎಲ್ಲಾ ಮತದಾರರು ತಮ್ಮ ಹಕ್ಕನ್ನು ಚಲಾಯಿಸುವ ಮೂಲಕ ಶೇ. 100ರಷ್ಟು ಮತದಾನ ನಡೆಯಲು ಸಹಕರಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಅವರು ಕರೆ ನೀಡಿದರು.
ಅವರು ಸೋಮವಾರ ನಗರದ ಸಂತ ಅಲೋಶಿಯಸ್ ಕಾಲೇಜಿನ ಎರಿಕ್ ಮಥಾಯಸ್ ಸಭಾಂಗಣದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಸಂತ ಅಲೋಶಿಯಸ್ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಯೋಗದಲ್ಲಿ ಆಯೋಜಿಸಲಾದ ಮತದಾನ ಜಾಗೃತಿಯ ವ್ಯಂಗ್ಯ ಚಿತ್ರಗಳ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.


18 ವರ್ಷ ಪೂರೈಸಿದ ಎಲ್ಲರಿಗೂ ಭಾರತೀಯ ಸಂವಿಧಾನ ನೀಡಿರುವ ಅದ್ಭುತ ಶಕ್ತಿ ಮತ ಚಲಾವಣೆಯ ಹಕ್ಕು.ಅದನ್ನು
ಮೇ 10.ರಂದು ನಡೆಯಲಿರುವ ಚುನಾವಣೆಯಲ್ಲಿ ಚಲಾಯಿಸುವ ಮೂಲಕ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತಗಳಲ್ಲೂ ತಮ್ಮ ಇಚ್ಛೆಯ ಶಾಸಕರನ್ನು ಆಯ್ಕೆ ಮಾಡುವಂತೆ ತಿಳಿಸಿದರು.
ಮತದಾನ ನನ್ನ ಹಕ್ಕು ಎಂಬ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪ್ರತಿಯೊಬ್ಬ ಮತದಾರನೂ ಮತಗಟ್ಟೆಗೆ ಬಂದು ತಮ್ಮ ಮತಚಲಾಯಿಸುವ ಮೂಲಕ ಸಂವಿಧಾನವನ್ನು ಎತ್ತಿ ಹಿಡಿಯಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಚನ್ನಬಸಪ್ಪ, ಸಂತ ಅಲೋಷಿಯಸ್ ಕಾಲೇಜಿನ ಪ್ರಾಂಶುಪಾಲ ರೆ.ಡಾ. ಪ್ರವೀಣ್ ಮಾರ್ಟಿಸ್, ವ್ಯಂಗ್ಯ ಚಿತ್ರಕಾರ ಜಾನ್ ಚಂದ್ರನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು