8:59 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು, ಮಲೆನಾಡಿನಲ್ಲಿ ಶಾಂತಿ ಸ್ಥಾಪನೆಗೆ ಕ್ರಮ

11/06/2025, 21:15

ಬೆಂಗಳೂರು(reporterkarnataka.com): ಕರಾವಳಿ(ತುಳುನಾಡು) ಮತ್ತು ಮಲೆನಾಡು ಪ್ರದೇಶಗಳಲ್ಲಿ ಕೋಮುದ್ವೇಷ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರ ವಿಶೇಷ ಕೋಮು ನಿಗ್ರಹ ಪಡೆ ರಚಿಸಿದ್ದು, ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಅವರನ್ನು ಈ ವಿಶೇಷ ಪಡೆಯ ಪ್ರಭಾರ ಮುಖ್ಯಸ್ಥರಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.
ಸುಹಾಸ್ ಶೆಟ್ಟಿ ಮತ್ತು ಅಬ್ದುಲ್ ರಹೀಂ ಹತ್ಯೆಗಳ ಬೆನ್ನಲ್ಲೇ ಈ ಕಾರ್ಯಕ್ಕೆ ವೇಗ ಸಿಕ್ಕಿದ್ದು, ಈಗ ಕಾಲ ಕೂಡಿ ಬಂದಿದೆ.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಮಂಗಳೂರು ಕಮೀಷನರ್ ಅವರ ಕಾರ್ಯದಕ್ಷತೆಯ ಬಗ್ಗೆ ಆಕ್ಷೇಪಗಳು ಕೇಳಿ ಬಂದಿರುವುದರಿಂದ ಅವರನ್ನು ವರ್ಗಾವಣೆ ಮಾಡಿ ಹೊಸ ಅಧಿಕಾರಿಗಳನ್ನು ನೇಮಿಸಲಾಗಿದೆ. ಈ ಹೊಸ ಅಧಿಕಾರಿಗಳು ಕೆಲವು ತ್ವರಿತ ಕ್ರಮಗಳನ್ನು ಕೈಗೊಂಡಿದ್ದಾರಾದರೂ, ಇದು ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿದೆ.
ಗೃಹ ಸಚಿವ ಜಿ. ಪರಮೇಶ್ವರ್ ಅವರು ಈ ಹಿಂದೆ ಕೋಮು ನಿಗ್ರಹ ಪಡೆ ರಚನೆಯ ಬಗ್ಗೆ ಪ್ರಸ್ತಾಪಿಸಿದ್ದರೂ, ಅದು ಕಾರ್ಯರೂಪಕ್ಕೆ ಬಂದಿರಲಿಲ್ಲ. ಈಗ 236 ಅಧಿಕಾರಿ-ಸಿಬ್ಬಂದಿಯನ್ನು ಒಳಗೊಂಡಂತೆ ಈ ವಿಶೇಷ ಪಡೆಗೆ ರಾಜ್ಯ ಪೊಲೀಸ್ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ. ಈ ಪಡೆ ಶಿವಮೊಗ್ಗ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಲಿದೆ.
ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್)ಯಿಂದ ಡಿಐಜಿ ಸೇರಿ 240 ಹುದ್ದೆಗಳನ್ನು ಹಿಂಪಡೆದು ಈ ವಿಶೇಷ ಕಾರ್ಯಪಡೆ ರಚಿಸಲಾಗಿದೆ. ಇಬ್ಬರು ಇನ್ಸ್‌ಪೆಕ್ಟರ್‌ಗಳು ಸೇರಿದಂತೆ 236 ಮಂದಿಯನ್ನು ನಿಯೋಜಿಸಲಾಗಿದೆ. ಅಮಿತ್ ಸಿಂಗ್ ಅವರು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಕೋಮು ಸೂಕ್ಷ್ಮ ವಿಷಯಗಳಲ್ಲಿ ಸಾಮರಸ್ಯ ಸ್ಥಾಪಿಸುವ ಜವಾಬ್ದಾರಿಯನ್ನು ಅವರಿಗೆ ವಹಿಸಲಾಗಿದೆ.
ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಭವಿಷ್ಯದಲ್ಲಿ ಕೋಮು ಸಂಘರ್ಷಗಳಿಲ್ಲದೇ ಶಾಂತಿ ಮತ್ತು ಸಹಬಾಳ್ವೆ ಕಾಪಾಡುವ ನಿರೀಕ್ಷೆ ಎಲ್ಲರಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು