11:30 AM Monday20 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

Mangaluru | ಆನೆಗುಂಡಿ: ಅಶ್ವಥ ಕಟ್ಟೆ ಮೇಲ್ಛಾವಣಿ ಉದ್ಘಾಟನೆ; ವಾಸ್ತು ಪೂಜೆ

22/11/2025, 19:15

ಮಂಗಳೂರು(reporterkarnataka.com): ತ್ರಿಮೂರ್ತಿ ಸೇವಾ ಸಮಿತಿ (ರಿ.) ಬಿಜೈ, ಆನೆಗುಂಡಿ ಇದರ ಆವರಣದಲ್ಲಿರುವ ಅಶ್ವಥ ಕಟ್ಟೆಗೆ ಮೇಲ್ಛಾವಣೆ ಅಳವಡಿಸಲಾಗಿದ್ದು ಅದರ ಉದ್ಘಾಟನಾ ಸಮಾರಂಭ ಹಾಗೂ ಕಟ್ಟೆಯ ವಾಸ್ತು ಪೂಜೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಭಾಗವಹಿಸಿದರು.

ನಂತರ ಮಾತನಾಡಿದ ಶಾಸಕರು, ಸ್ಥಳೀಯರ ಬೇಡಿಕೆ ಹಾಗೂ ಭಕ್ತರ ಅನುಕೂಲಕ್ಕಾಗಿ ಇಲ್ಲಿನ ಅಶ್ವಥ ಕಟ್ಟೆಗೆ ಹಾಗೂ ಮೇಲ್ಛಾವಣಿಗೆ ಸಹಕಾರ ನೀಡಿರುವುದು ತೃಪ್ತಿ ತಂದಿದೆ. ಎಲ್ಲರಿಗೂ ಇದರಿಂದ ಉಪಯೋಗವಾದರೆ ಅದೇ ತೃಪ್ತಿ ಎಂದರು.
ವಾರ್ಡ್ ಅಧ್ಯಕ್ಷ ಕೆ. ನಾರಾಯಣ ಅವರು ಮಾತನಾಡಿ, ಕೆಲವು ವರ್ಷಗಳ ಹಿಂದೆ ನಿರ್ಮಾಣವಾದ ಇಲ್ಲಿನ ಅಶ್ವಥ ಕಟ್ಟೆಗೆ ಶಾಸಕ ವೇದವ್ಯಾಸ ಕಾಮತ್ ರವರು ನಮ್ಮ ಮನವಿಗೆ ಸ್ಪಂದಿಸಿ ಸಂಪೂರ್ಣ ಸಹಕಾರ ನೀಡಿದ್ದರು. ಅದರ ಉದ್ಘಾಟನೆಯಾದಾಗಲೇ ಇಲ್ಲಿನ ಭಕ್ತರ ಅನುಕೂಲಕ್ಕೆ ಅಗತ್ಯವಿರುವ ಮೇಲ್ಛಾವಣೆಯನ್ನೂ ಒದಗಿಸಿ ಕೊಡುತ್ತೇನೆಂದು ಭರವಸೆ ನೀಡಿದ್ದರು. ಇದೀಗ ಅದೂ ಸಹ ಈಡೇರಿದ್ದು ಅಗತ್ಯ ಬಿದ್ದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಸಹಕಾರ ನೀಡುತ್ತೇನೆ ಎಂದಿರುವ ಶಾಸಕರಿಗೆ ಬಿಜೈ 31 ನೇ ವಾರ್ಡ್ ನ ಜನತೆ ಹಾಗೂ ತ್ರಿಮೂರ್ತಿ ಸೇವಾ ಸಮಿತಿಯ ಸರ್ವ ಸದಸ್ಯರ ಪರವಾಗಿ ಅನಂತ ಕೋಟಿ ಧನ್ಯವಾದಗಳು ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಪ್ರಶಾಂತ್ ಆಳ್ವ, ಜಯಕುಮಾರ್, ಋತ್ವಿಕ್ ಕದ್ರಿ, ಹಿರಿಯರಾದ ನಾರಾಯಣ ಮಾಸ್ಟರ್, ತ್ರಿಮೂರ್ತಿ ಸೇವಾ ಸಮಿತಿಯ ಅಧ್ಯಕ್ಷರಾದ ವಸಂತ್ ಸಹಿತ ಎಲ್ಲಾ ಪದಾಧಿಕಾರಿಗಳು ಹಾಗೂ ಬಿಜೆಪಿ ಪ್ರಮುಖರು, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು