1:27 AM Sunday20 - July 2025
ಬ್ರೇಕಿಂಗ್ ನ್ಯೂಸ್
ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು

ಇತ್ತೀಚಿನ ಸುದ್ದಿ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ವೈಭವ: ‘ಪಿಲಿನಲಿಕೆ’ಯ ರಂಗು

04/10/2022, 20:42

ಮಂಗಳೂರು(reporter Karnataka.com): ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು ದಸರಾ ಆಚರಣೆ ವಿವಿಧ ಸಾಂಸ್ಕೃತಿಕ ಸಂಘಟನೆಗಳ ವತಿಯಿಂದ ಆಗಮನದ ಗೇಟ್‌ನ ಬಳಿಯಿರುವ ಬಯಲು ವೇದಿಕೆಯಲ್ಲಿ ಎರಡು ದಿನಗಳ ಕಾಲ ನಡೆಯಿತು.

ಈ ಸಂಭ್ರಮಾಚರಣೆಯಲ್ಲಿ ಭಜನೆ, ದಾಂಡಿಯಾ, ಯಕ್ಷಗಾನ, ‘ಪಿಲಿ ವೇಷ’ ಮೇಳೈಸಿತು. ಬಜಪೆಯ ಈಶ್ವರಕಟ್ಟೆಯ ಶ್ರೀರಾಮ ಕುಣಿತ ಭಜನಾ ಮಂಡಳಿಯ ಯುವ ಮತ್ತು ಉತ್ಸಾಹಿ ಸದಸ್ಯರು ಸಂದರ್ಭಕ್ಕೆ ತಕ್ಕಂತೆ ಸಂಗೀತದ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಾರಂಭಿಸಿದರು. ಕಳೆದ ವರ್ಷ 10 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಮಂಗಳೂರು ಅಂತಾರಾಷ್ಟ್ರೀಯ ಮೂಲಕ ಹಾದು ಹೋಗುವುದರೊಂದಿಗೆ, ವಿಮಾನ ನಿಲ್ದಾಣದ ತಂಡವು ಜೀವನದ ಎಲ್ಲಾ ಹಂತಗಳ ಪ್ರಯಾಣಿಕರಿಗೆ ವೈವಿಧ್ಯಮಯ ಸಾಂಸ್ಕೃತಿಕ ಅನುಭವಗಳನ್ನು ತರುವುದನ್ನು ಮುಂದುವರೆಸಿದೆ. 

ನಗರದ ವೃತ್ತಿಪರ ಕಾಲೇಜಿನ ವಿದ್ಯಾರ್ಥಿಗಳು ದಾಂಡಿಯಾ, ಭರತನಾಟ್ಯ, ಯಕ್ಷಗಾನ ನೃತ್ಯಗಳನ್ನು ಪ್ರಸ್ತುತಪಡಿಸಿದರು. ಇದರ ನಂತರ ಪ್ರಸಿದ್ಧವಾದ ‘ಪಿಲಿ ನಲಿಕೆ’ ನಡೆಯಿತು. ಅಕ್ಟೋಬರ್ 4 ರಂದು ಆಯುಧಪೂಜೆ ದಿನ ಪಿಲಿ ನಲಿಕೆ, ಭರತನಾಟ್ಯ, ಸೆಮಿ ಕ್ಲಾಸಿಕಲ್ ಮತ್ತು ಫಿಲ್ಮಿ ಡ್ಯಾನ್ಸ್ ಪ್ರಸ್ತುತಪಡಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು