12:15 AM Monday12 - May 2025
ಬ್ರೇಕಿಂಗ್ ನ್ಯೂಸ್
ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್…

ಇತ್ತೀಚಿನ ಸುದ್ದಿ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಸಿಲುಕಿದ್ದ 15 ಮಂದಿ ಸಿರಿಯಾ ನಾವಿಕರ ರಕ್ಷಣೆ; ಕರಾವಳಿ ರಕ್ಷಣಾ ಪಡೆ ಕಾರ್ಯಾಚರಣೆ

22/06/2022, 10:45

ಮಂಗಳೂರು(reporterkarnataka.com):  ಪ್ರತೀಕೂಲ ಹವಾಮಾನದಿಂದಾಗಿ ಅರಬ್ಬೀ ಸಮುದ್ರದಲ್ಲಿ ಜಿಲ್ಲೆಯ ಕರಾವಳಿ ತೀರದಿಂದ 5.2 ಮೈಲಿ ದೂರದಲ್ಲಿ ಲಂಗರು ಹಾಕಿದ್ದ ವಿದೇಶಿ ಹಡಗಿನಲ್ಲಿದ್ದ 15 ಮಂದಿ ವಿದೇಶಿ ಪ್ರಜೆಗಳನ್ನು ಭಾರತೀಯ ಕರಾವಳಿ ರಕ್ಷಣಾ ಪಡೆಯು (ಐಸಿಜಿ) ರಕ್ಷಣೆ ಮಾಡಿದೆ.

ಸಿರಿಯಾ ದೇಶದ 15 ನಾವಿಕರು ಎಂ.ವಿ.ಪ್ರಿನ್ಸಸ್‌ ಮಿರಾಲ್‌ ಎಂಬ ಹಡಗಿನಲ್ಲಿ ಅರಬ್ಬೀ ಸಮುದ್ರದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದರು. ಅವರನ್ನು  ಐಸಿಜಿ ಸಿಬ್ಬಂದಿಗಳು ಮಂಗಳವಾರ ರಕ್ಷಣೆ ಮಾಡಿದ್ದಾರೆ. ಹಡಗಿನಲ್ಲಿ 8 ಸಾವಿರ ಟನ್‌ ಉಕ್ಕಿನ ಕಾಯಿಲ್‌ಗಳನ್ನು ಚೀನಾದ ಟಿಯಾಂಜಿನ್‌ನಿಂದ ಲೆಬನಾನ್‌ಗೆ ಸಾಗಿಸಲಾಗುತ್ತಿತ್ತು. ಹಡಗಿನ ಒಳಭಾಗದಲ್ಲಿ ಸಣ್ಣ ರಂಧ್ರದ ಮೂಲಕ ನೀರು ಒಳಗೆ ನುಗ್ಗಿತ್ತು. ಅದನ್ನು ದುರಸ್ತಿ ಪಡಿಸುವ ಸಲುವಾಗಿ ಈ ಹಡಗನ್ನು ನವಮಂಗಳೂರು 

ಬಂದರಿಗೆ ತರಲು ಅನುಮತಿ ನೀಡುವಂತೆ ಕ್ಯಾಪ್ಟನ್‌ ಈ ಮೇಲ್‌ ಮೂಲಕ ದಕ್ಷಿಣ ಕನ್ನಡ ಜಿಲ್ಲಾಡಳಿತವನ್ನು ಕೋರಿದ್ದರು.

ಈ ನಡುವೆ ಭಾರತೀಯ ಕರಾವಳಿ ರಕ್ಷಣಾ ಪಡೆಯ ಸಿಬ್ಬಂದಿ ಪ್ರತೀಕೂಲ ಹವಾಮಾನವನ್ನು ಲೆಕ್ಕಿಸದೇ ವಿಕ್ರಮ್‌ ಹಾಗೂ ಅಮರ್ಥ್ಯ ಹಡಗುಗಳಲ್ಲಿ ಸ್ಥಳಕ್ಕೆ ಧಾವಿಸಿ, ಸಮುದ್ರದಲ್ಲಿ ಸಿಲುಕಿದ್ದ ಸಿರಿಯಾ ಪ್ರಜೆಗಳನ್ನು ದಡಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.

…….

ಹಿಂದೂ ಮಹಾಸಾಗರ ಪ್ರದೇಶದ ವ್ಯಾಪ್ತಿಯಲ್ಲಿ ಪತ್ತೆ ಮತ್ತು ರಕ್ಷಣಾ ಕಾರ್ಯಾಚರಣೆಗೆ ನೋಡೆಲ್‌ ಏಜೆನ್ಸಿ ಆಗಿರುವ ಭಾರತೀಯ ಕರಾವಳಿ ರಕ್ಷಣಾ ಪಡೆಯ ರಕ್ಷಣಾ ಸಾಮರ್ಥ್ಯವನ್ನು ಈ ಯಶಸ್ವಿ ಕಾರ್ಯಾಚರಣೆಯು ಮತ್ತೆ ಸಾಬೀತು ಮಾಡಿದೆ. ‘ನಾವು ರಕ್ಷಿಸುತ್ತೇವೆ’ ಎಂಬ ಧ್ಯೇಯಕ್ಕೆ ಕರಾವಳಿ ರಕ್ಷಣಾ ಪಡೆಯು ಬದ್ಧವಾಗಿರುವುದನ್ನು ಎತ್ತಿ ತೋರಿಸಿದೆ ಎಂದು ಐಸಿಜಿ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು