4:22 AM Thursday19 - March 2026
ಬ್ರೇಕಿಂಗ್ ನ್ಯೂಸ್
Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು…

ಇತ್ತೀಚಿನ ಸುದ್ದಿ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಸಿಲುಕಿದ್ದ 15 ಮಂದಿ ಸಿರಿಯಾ ನಾವಿಕರ ರಕ್ಷಣೆ; ಕರಾವಳಿ ರಕ್ಷಣಾ ಪಡೆ ಕಾರ್ಯಾಚರಣೆ

22/06/2022, 10:45

ಮಂಗಳೂರು(reporterkarnataka.com):  ಪ್ರತೀಕೂಲ ಹವಾಮಾನದಿಂದಾಗಿ ಅರಬ್ಬೀ ಸಮುದ್ರದಲ್ಲಿ ಜಿಲ್ಲೆಯ ಕರಾವಳಿ ತೀರದಿಂದ 5.2 ಮೈಲಿ ದೂರದಲ್ಲಿ ಲಂಗರು ಹಾಕಿದ್ದ ವಿದೇಶಿ ಹಡಗಿನಲ್ಲಿದ್ದ 15 ಮಂದಿ ವಿದೇಶಿ ಪ್ರಜೆಗಳನ್ನು ಭಾರತೀಯ ಕರಾವಳಿ ರಕ್ಷಣಾ ಪಡೆಯು (ಐಸಿಜಿ) ರಕ್ಷಣೆ ಮಾಡಿದೆ.

ಸಿರಿಯಾ ದೇಶದ 15 ನಾವಿಕರು ಎಂ.ವಿ.ಪ್ರಿನ್ಸಸ್‌ ಮಿರಾಲ್‌ ಎಂಬ ಹಡಗಿನಲ್ಲಿ ಅರಬ್ಬೀ ಸಮುದ್ರದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದರು. ಅವರನ್ನು  ಐಸಿಜಿ ಸಿಬ್ಬಂದಿಗಳು ಮಂಗಳವಾರ ರಕ್ಷಣೆ ಮಾಡಿದ್ದಾರೆ. ಹಡಗಿನಲ್ಲಿ 8 ಸಾವಿರ ಟನ್‌ ಉಕ್ಕಿನ ಕಾಯಿಲ್‌ಗಳನ್ನು ಚೀನಾದ ಟಿಯಾಂಜಿನ್‌ನಿಂದ ಲೆಬನಾನ್‌ಗೆ ಸಾಗಿಸಲಾಗುತ್ತಿತ್ತು. ಹಡಗಿನ ಒಳಭಾಗದಲ್ಲಿ ಸಣ್ಣ ರಂಧ್ರದ ಮೂಲಕ ನೀರು ಒಳಗೆ ನುಗ್ಗಿತ್ತು. ಅದನ್ನು ದುರಸ್ತಿ ಪಡಿಸುವ ಸಲುವಾಗಿ ಈ ಹಡಗನ್ನು ನವಮಂಗಳೂರು 

ಬಂದರಿಗೆ ತರಲು ಅನುಮತಿ ನೀಡುವಂತೆ ಕ್ಯಾಪ್ಟನ್‌ ಈ ಮೇಲ್‌ ಮೂಲಕ ದಕ್ಷಿಣ ಕನ್ನಡ ಜಿಲ್ಲಾಡಳಿತವನ್ನು ಕೋರಿದ್ದರು.

ಈ ನಡುವೆ ಭಾರತೀಯ ಕರಾವಳಿ ರಕ್ಷಣಾ ಪಡೆಯ ಸಿಬ್ಬಂದಿ ಪ್ರತೀಕೂಲ ಹವಾಮಾನವನ್ನು ಲೆಕ್ಕಿಸದೇ ವಿಕ್ರಮ್‌ ಹಾಗೂ ಅಮರ್ಥ್ಯ ಹಡಗುಗಳಲ್ಲಿ ಸ್ಥಳಕ್ಕೆ ಧಾವಿಸಿ, ಸಮುದ್ರದಲ್ಲಿ ಸಿಲುಕಿದ್ದ ಸಿರಿಯಾ ಪ್ರಜೆಗಳನ್ನು ದಡಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.

…….

ಹಿಂದೂ ಮಹಾಸಾಗರ ಪ್ರದೇಶದ ವ್ಯಾಪ್ತಿಯಲ್ಲಿ ಪತ್ತೆ ಮತ್ತು ರಕ್ಷಣಾ ಕಾರ್ಯಾಚರಣೆಗೆ ನೋಡೆಲ್‌ ಏಜೆನ್ಸಿ ಆಗಿರುವ ಭಾರತೀಯ ಕರಾವಳಿ ರಕ್ಷಣಾ ಪಡೆಯ ರಕ್ಷಣಾ ಸಾಮರ್ಥ್ಯವನ್ನು ಈ ಯಶಸ್ವಿ ಕಾರ್ಯಾಚರಣೆಯು ಮತ್ತೆ ಸಾಬೀತು ಮಾಡಿದೆ. ‘ನಾವು ರಕ್ಷಿಸುತ್ತೇವೆ’ ಎಂಬ ಧ್ಯೇಯಕ್ಕೆ ಕರಾವಳಿ ರಕ್ಷಣಾ ಪಡೆಯು ಬದ್ಧವಾಗಿರುವುದನ್ನು ಎತ್ತಿ ತೋರಿಸಿದೆ ಎಂದು ಐಸಿಜಿ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು