7:17 AM Thursday17 - July 2025
ಬ್ರೇಕಿಂಗ್ ನ್ಯೂಸ್
ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ…

ಇತ್ತೀಚಿನ ಸುದ್ದಿ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಸಿಲುಕಿದ್ದ 15 ಮಂದಿ ಸಿರಿಯಾ ನಾವಿಕರ ರಕ್ಷಣೆ; ಕರಾವಳಿ ರಕ್ಷಣಾ ಪಡೆ ಕಾರ್ಯಾಚರಣೆ

22/06/2022, 10:45

ಮಂಗಳೂರು(reporterkarnataka.com):  ಪ್ರತೀಕೂಲ ಹವಾಮಾನದಿಂದಾಗಿ ಅರಬ್ಬೀ ಸಮುದ್ರದಲ್ಲಿ ಜಿಲ್ಲೆಯ ಕರಾವಳಿ ತೀರದಿಂದ 5.2 ಮೈಲಿ ದೂರದಲ್ಲಿ ಲಂಗರು ಹಾಕಿದ್ದ ವಿದೇಶಿ ಹಡಗಿನಲ್ಲಿದ್ದ 15 ಮಂದಿ ವಿದೇಶಿ ಪ್ರಜೆಗಳನ್ನು ಭಾರತೀಯ ಕರಾವಳಿ ರಕ್ಷಣಾ ಪಡೆಯು (ಐಸಿಜಿ) ರಕ್ಷಣೆ ಮಾಡಿದೆ.

ಸಿರಿಯಾ ದೇಶದ 15 ನಾವಿಕರು ಎಂ.ವಿ.ಪ್ರಿನ್ಸಸ್‌ ಮಿರಾಲ್‌ ಎಂಬ ಹಡಗಿನಲ್ಲಿ ಅರಬ್ಬೀ ಸಮುದ್ರದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದರು. ಅವರನ್ನು  ಐಸಿಜಿ ಸಿಬ್ಬಂದಿಗಳು ಮಂಗಳವಾರ ರಕ್ಷಣೆ ಮಾಡಿದ್ದಾರೆ. ಹಡಗಿನಲ್ಲಿ 8 ಸಾವಿರ ಟನ್‌ ಉಕ್ಕಿನ ಕಾಯಿಲ್‌ಗಳನ್ನು ಚೀನಾದ ಟಿಯಾಂಜಿನ್‌ನಿಂದ ಲೆಬನಾನ್‌ಗೆ ಸಾಗಿಸಲಾಗುತ್ತಿತ್ತು. ಹಡಗಿನ ಒಳಭಾಗದಲ್ಲಿ ಸಣ್ಣ ರಂಧ್ರದ ಮೂಲಕ ನೀರು ಒಳಗೆ ನುಗ್ಗಿತ್ತು. ಅದನ್ನು ದುರಸ್ತಿ ಪಡಿಸುವ ಸಲುವಾಗಿ ಈ ಹಡಗನ್ನು ನವಮಂಗಳೂರು 

ಬಂದರಿಗೆ ತರಲು ಅನುಮತಿ ನೀಡುವಂತೆ ಕ್ಯಾಪ್ಟನ್‌ ಈ ಮೇಲ್‌ ಮೂಲಕ ದಕ್ಷಿಣ ಕನ್ನಡ ಜಿಲ್ಲಾಡಳಿತವನ್ನು ಕೋರಿದ್ದರು.

ಈ ನಡುವೆ ಭಾರತೀಯ ಕರಾವಳಿ ರಕ್ಷಣಾ ಪಡೆಯ ಸಿಬ್ಬಂದಿ ಪ್ರತೀಕೂಲ ಹವಾಮಾನವನ್ನು ಲೆಕ್ಕಿಸದೇ ವಿಕ್ರಮ್‌ ಹಾಗೂ ಅಮರ್ಥ್ಯ ಹಡಗುಗಳಲ್ಲಿ ಸ್ಥಳಕ್ಕೆ ಧಾವಿಸಿ, ಸಮುದ್ರದಲ್ಲಿ ಸಿಲುಕಿದ್ದ ಸಿರಿಯಾ ಪ್ರಜೆಗಳನ್ನು ದಡಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.

…….

ಹಿಂದೂ ಮಹಾಸಾಗರ ಪ್ರದೇಶದ ವ್ಯಾಪ್ತಿಯಲ್ಲಿ ಪತ್ತೆ ಮತ್ತು ರಕ್ಷಣಾ ಕಾರ್ಯಾಚರಣೆಗೆ ನೋಡೆಲ್‌ ಏಜೆನ್ಸಿ ಆಗಿರುವ ಭಾರತೀಯ ಕರಾವಳಿ ರಕ್ಷಣಾ ಪಡೆಯ ರಕ್ಷಣಾ ಸಾಮರ್ಥ್ಯವನ್ನು ಈ ಯಶಸ್ವಿ ಕಾರ್ಯಾಚರಣೆಯು ಮತ್ತೆ ಸಾಬೀತು ಮಾಡಿದೆ. ‘ನಾವು ರಕ್ಷಿಸುತ್ತೇವೆ’ ಎಂಬ ಧ್ಯೇಯಕ್ಕೆ ಕರಾವಳಿ ರಕ್ಷಣಾ ಪಡೆಯು ಬದ್ಧವಾಗಿರುವುದನ್ನು ಎತ್ತಿ ತೋರಿಸಿದೆ ಎಂದು ಐಸಿಜಿ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು