12:24 AM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಸಿಲುಕಿದ್ದ 15 ಮಂದಿ ಸಿರಿಯಾ ನಾವಿಕರ ರಕ್ಷಣೆ; ಕರಾವಳಿ ರಕ್ಷಣಾ ಪಡೆ ಕಾರ್ಯಾಚರಣೆ

22/06/2022, 10:45

ಮಂಗಳೂರು(reporterkarnataka.com):  ಪ್ರತೀಕೂಲ ಹವಾಮಾನದಿಂದಾಗಿ ಅರಬ್ಬೀ ಸಮುದ್ರದಲ್ಲಿ ಜಿಲ್ಲೆಯ ಕರಾವಳಿ ತೀರದಿಂದ 5.2 ಮೈಲಿ ದೂರದಲ್ಲಿ ಲಂಗರು ಹಾಕಿದ್ದ ವಿದೇಶಿ ಹಡಗಿನಲ್ಲಿದ್ದ 15 ಮಂದಿ ವಿದೇಶಿ ಪ್ರಜೆಗಳನ್ನು ಭಾರತೀಯ ಕರಾವಳಿ ರಕ್ಷಣಾ ಪಡೆಯು (ಐಸಿಜಿ) ರಕ್ಷಣೆ ಮಾಡಿದೆ.

ಸಿರಿಯಾ ದೇಶದ 15 ನಾವಿಕರು ಎಂ.ವಿ.ಪ್ರಿನ್ಸಸ್‌ ಮಿರಾಲ್‌ ಎಂಬ ಹಡಗಿನಲ್ಲಿ ಅರಬ್ಬೀ ಸಮುದ್ರದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದರು. ಅವರನ್ನು  ಐಸಿಜಿ ಸಿಬ್ಬಂದಿಗಳು ಮಂಗಳವಾರ ರಕ್ಷಣೆ ಮಾಡಿದ್ದಾರೆ. ಹಡಗಿನಲ್ಲಿ 8 ಸಾವಿರ ಟನ್‌ ಉಕ್ಕಿನ ಕಾಯಿಲ್‌ಗಳನ್ನು ಚೀನಾದ ಟಿಯಾಂಜಿನ್‌ನಿಂದ ಲೆಬನಾನ್‌ಗೆ ಸಾಗಿಸಲಾಗುತ್ತಿತ್ತು. ಹಡಗಿನ ಒಳಭಾಗದಲ್ಲಿ ಸಣ್ಣ ರಂಧ್ರದ ಮೂಲಕ ನೀರು ಒಳಗೆ ನುಗ್ಗಿತ್ತು. ಅದನ್ನು ದುರಸ್ತಿ ಪಡಿಸುವ ಸಲುವಾಗಿ ಈ ಹಡಗನ್ನು ನವಮಂಗಳೂರು 

ಬಂದರಿಗೆ ತರಲು ಅನುಮತಿ ನೀಡುವಂತೆ ಕ್ಯಾಪ್ಟನ್‌ ಈ ಮೇಲ್‌ ಮೂಲಕ ದಕ್ಷಿಣ ಕನ್ನಡ ಜಿಲ್ಲಾಡಳಿತವನ್ನು ಕೋರಿದ್ದರು.

ಈ ನಡುವೆ ಭಾರತೀಯ ಕರಾವಳಿ ರಕ್ಷಣಾ ಪಡೆಯ ಸಿಬ್ಬಂದಿ ಪ್ರತೀಕೂಲ ಹವಾಮಾನವನ್ನು ಲೆಕ್ಕಿಸದೇ ವಿಕ್ರಮ್‌ ಹಾಗೂ ಅಮರ್ಥ್ಯ ಹಡಗುಗಳಲ್ಲಿ ಸ್ಥಳಕ್ಕೆ ಧಾವಿಸಿ, ಸಮುದ್ರದಲ್ಲಿ ಸಿಲುಕಿದ್ದ ಸಿರಿಯಾ ಪ್ರಜೆಗಳನ್ನು ದಡಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.

…….

ಹಿಂದೂ ಮಹಾಸಾಗರ ಪ್ರದೇಶದ ವ್ಯಾಪ್ತಿಯಲ್ಲಿ ಪತ್ತೆ ಮತ್ತು ರಕ್ಷಣಾ ಕಾರ್ಯಾಚರಣೆಗೆ ನೋಡೆಲ್‌ ಏಜೆನ್ಸಿ ಆಗಿರುವ ಭಾರತೀಯ ಕರಾವಳಿ ರಕ್ಷಣಾ ಪಡೆಯ ರಕ್ಷಣಾ ಸಾಮರ್ಥ್ಯವನ್ನು ಈ ಯಶಸ್ವಿ ಕಾರ್ಯಾಚರಣೆಯು ಮತ್ತೆ ಸಾಬೀತು ಮಾಡಿದೆ. ‘ನಾವು ರಕ್ಷಿಸುತ್ತೇವೆ’ ಎಂಬ ಧ್ಯೇಯಕ್ಕೆ ಕರಾವಳಿ ರಕ್ಷಣಾ ಪಡೆಯು ಬದ್ಧವಾಗಿರುವುದನ್ನು ಎತ್ತಿ ತೋರಿಸಿದೆ ಎಂದು ಐಸಿಜಿ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು