2:56 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

Mangaluru | ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನೀರುಮಾರ್ಗ ಶಾಖೆಯ ಗ್ರಾಹಕರ ಸಭೆ

02/06/2025, 11:38

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೀರುಮಾರ್ಗ ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ನೀರುಮಾರ್ಗ ಶಾಖೆಯಲ್ಲಿ ಜರುಗಿತು.
ಕಾರ‍್ಯಕ್ರಮವನ್ನು ಸಂಘದ ಸದಸ್ಯರುಗಳಾದ ಪುಟ್ಟಸ್ವಾಮಿ ಎಚ್., ಸತೀಶ್ ಕಂಪ, ಲಕ್ಷಣ ಪೂಜಾರಿ, ಲವೀನಾ ಪಿರೇರಾ ಹಾಗೂ ಶಶಿಪ್ರಭ ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು.
ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ “ಠೇವಣಿ ಸಂಗ್ರಹಣೆಯೊಂದಿಗೆ ಸಾಲ ವಸೂಲಾತಿ ಕ್ರಮವು ಸರಿಯಾದ ಪ್ರಮಾಣದಲ್ಲಿ ಆದಾಗ ಮಾತ್ರ ಸಂಘದ ಬೆಳವಣಿಗೆ ಸಾಧ್ಯ , ಸಿಬ್ಬಂದಿ ವರ್ಗ, ಗ್ರಾಹಕರ ಸಹಕಾರದೊಂದಿಗೆ ಪ್ರತಿ ವರ್ಷದಂತೆ ಈ ವರ್ಷವೂ ಸಂಘವು ಹೆಚ್ಚಿನ ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯವಾಗಿದೆ. ಅಗತ್ಯ ಸಂದರ್ಭಗಳಲ್ಲಿ ಹಿರಿಯ ನಾಗರಿಕ ಸದಸ್ಯರ ಮನೆಗೆ ಭೇಟಿ ನೀಡಿ ಸೇವೆ ನೀಡುತ್ತಿದ್ದೇವೆ. ಈಗಾಗಲೇ ಸಂಘದ ಸದಸ್ಯರಿಗೆ ಹಬ್ಬದ ಕೊಡುಗೆಯಾಗಿ 1000 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 10.50 ವನ್ನು ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯ ರೂ. ೭೭೮೮/- ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲ ನೀಡಲಾಗುತ್ತಿದೆ. ಸಂಘದಲ್ಲಿ ಲಭ್ಯವಿರುವ ಇ-ಸ್ಟಾಂಪಿಂಗ್ ಸೇವೆ, ವಿಮಾ ಸೇವೆ, ಭವಿಷ್ಯ ಸುರಕ್ಷಾ ಯೋಜನೆಯ ಜೊತೆಗೆ ಎಲ್ಲಾ ಸೇವೆಗಳನ್ನು ಸದುಪಯೋಗ ಮಾಡಿಕೊಳ್ಳುವಂತೆ ಗ್ರಾಹಕರಲ್ಲಿ ವಿನಂತಿಸಿದರು.
ಈ ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ, ನಿರ್ದೇಶಕರಾದ ಸೀತಾರಾಮ್ ಎನ್., ರಮಾನಾಥ ಸನಿಲ್, ಗೋಪಾಲ್ ಎಂ. ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಸಂಘದ ನೀರುಮಾರ್ಗ ಶಾಖೆಯ ಸಿಬ್ಬಂದಿಯಾದ ಅಕ್ಷತಾ ಪಿ. ಸ್ವಾಗತಿಸಿ , ಲಾವಣ್ಯ ವಂದಿಸಿದರು. ಪ್ರಭಾರ ಶಾಖಾಧಿಕಾರಿ ಹರ್ಷಿತಾ ಕಾರ‍್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು