4:17 PM Saturday19 - September 2026
ಬ್ರೇಕಿಂಗ್ ನ್ಯೂಸ್
*ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ…

ಇತ್ತೀಚಿನ ಸುದ್ದಿ

Mangaluru | ಆ.10: ಕಲಾಸಾಧನದಿಂದ ‘ಸ್ವರಧಾರ’ ಸಂಗೀತ ಉತ್ಸವ

08/08/2025, 22:16

ಮಂಗಳೂರು(reporterkarnataka.com): ಮಂಗಳೂರು ಕಲಾ ಸಾಧನ ವತಿಯಿಂದ
ಸ್ವರಧಾರಾ ಸಂಗೀತ ಉತ್ಸವ ಆ.10ರಂದು ಸಂಜೆ 5 ಗಂಟೆಯಿಂದ ನಗರದ ಓಶಿಯನ್ ಪರ್ಲ್ ಸಭಾಂಗಣದಲ್ಲಿ ನಡೆಯಲಿದೆ.
ಉತ್ಸವದಲ್ಲಿ ಪ್ರಸಿದ್ಧ ಹಿಂದೂಸ್ತಾನಿ ಗಾಯಕ ಸಂಗೀತ ನಾಟಕ ಅಕಾಡೆಮಿ ನವದೆಹಲಿಯಿಂದ ಭಾರತರತ್ನ ಉಸ್ತಾದ್ ಬಿಸ್ಮಿಲ್ಲಾ ಖಾನ್, ಯುವ ಪುರಸ್ಕಾರ ಪಂಡಿತ್ ಕುಮಾರ್ ಮರ್ದೂರ್ ಭಾಗವಹಿಸಲಿದ್ದಾರೆ. ಕುಮಾರ್ ಅವರು ಕಿರಾಣಾ, ಗ್ವಾಲಿಯರ್ ಮತ್ತು ಜೈಪುರ ಘರಾಣೆಗಳ ಶೈಲಿಗಳನ್ನು ಬೆರೆಸಿ ತಮ್ಮದೇ ಆದ ಗಾಯನವನ್ನು ರಚಿಸಿ ದೇಶ ವಿದೇಶಗಳಲ್ಲಿ ಖ್ಯಾತಿ ಪಡೆದವರು. ಖ್ಯಾತ ಹಿಂದೂಸ್ತಾನಿ ಗಾಯಕ ಪಂಡಿತ್ ಸೋಮನಾಥ ಮರ್ದೂರರ ಫುತ್ರ.


ಕುಮಾರ್ 2011ರಿಂದ 2021 ರವರೆಗೆ 10 ವರ್ಷಗಳ ಕಾಲ ಕೋಲ್ಕತ್ತಾದ ಐಟಿಸಿ-ಸಂಗೀತ ಸಂಶೋಧನಾ ಅಕಾಡೆಮಿಯಲ್ಲಿ ಬೋಧನಾ ಅಧ್ಯಾಪಕರಾಗಿ ಸೇವೆ ಸಲ್ಲಿಸಿದವರು. ಅಮೆರಿಕ ಸಂಯುಕ್ತ ಸಂಸ್ಥಾನ, ಕೆನಡಾ, ಸಿಂಗಾಪುರ, ಬಾಂಗ್ಲಾ ದೇಶಗಳಲ್ಲಿ ಕಾರ್ಯ ನೀಡಿ ಖ್ಯಾತಿ ಪಡೆದವರು. ಉತ್ಸವದಲ್ಲಿ ಅಕ್ಷಯ ಜೋಶಿ ಧಾರವಾಡ್ ತಬಲಾ ಮತ್ತು ಸತೀಶ್ ಭಟ್ ಹೆಗ್ಗಾರ್ ಹಾರ್ಮೊನಿಯಂ ಸಾಥ್ ನೀಡಲಿದ್ದಾರೆ ಎಂದು ಕಲಾ ಸಾಧನ ಕೇಂದ್ರದ ನಿರ್ದೇಶಕಿ ವಿಭಾ ಶ್ರೀನಿವಾಸ ನಾಯಕ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ನೆರವೇರಿಸಲಿದ್ದಾರೆ.
ಪತ್ರಿಕಾಗೋಷ್ಠಿ ಯಲ್ಲಿ ಸಂಸ್ಥೆಯ ಗೌರವ ಸಲಹೆಗಾರ ಶ್ರೀನಿವಾಸ್ ನಾಯಕ್ ಇಂದಾಜೆ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು