8:28 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

Mangaluru | ಆ.10: ಕಲಾಸಾಧನದಿಂದ ‘ಸ್ವರಧಾರ’ ಸಂಗೀತ ಉತ್ಸವ

08/08/2025, 22:16

ಮಂಗಳೂರು(reporterkarnataka.com): ಮಂಗಳೂರು ಕಲಾ ಸಾಧನ ವತಿಯಿಂದ
ಸ್ವರಧಾರಾ ಸಂಗೀತ ಉತ್ಸವ ಆ.10ರಂದು ಸಂಜೆ 5 ಗಂಟೆಯಿಂದ ನಗರದ ಓಶಿಯನ್ ಪರ್ಲ್ ಸಭಾಂಗಣದಲ್ಲಿ ನಡೆಯಲಿದೆ.
ಉತ್ಸವದಲ್ಲಿ ಪ್ರಸಿದ್ಧ ಹಿಂದೂಸ್ತಾನಿ ಗಾಯಕ ಸಂಗೀತ ನಾಟಕ ಅಕಾಡೆಮಿ ನವದೆಹಲಿಯಿಂದ ಭಾರತರತ್ನ ಉಸ್ತಾದ್ ಬಿಸ್ಮಿಲ್ಲಾ ಖಾನ್, ಯುವ ಪುರಸ್ಕಾರ ಪಂಡಿತ್ ಕುಮಾರ್ ಮರ್ದೂರ್ ಭಾಗವಹಿಸಲಿದ್ದಾರೆ. ಕುಮಾರ್ ಅವರು ಕಿರಾಣಾ, ಗ್ವಾಲಿಯರ್ ಮತ್ತು ಜೈಪುರ ಘರಾಣೆಗಳ ಶೈಲಿಗಳನ್ನು ಬೆರೆಸಿ ತಮ್ಮದೇ ಆದ ಗಾಯನವನ್ನು ರಚಿಸಿ ದೇಶ ವಿದೇಶಗಳಲ್ಲಿ ಖ್ಯಾತಿ ಪಡೆದವರು. ಖ್ಯಾತ ಹಿಂದೂಸ್ತಾನಿ ಗಾಯಕ ಪಂಡಿತ್ ಸೋಮನಾಥ ಮರ್ದೂರರ ಫುತ್ರ.


ಕುಮಾರ್ 2011ರಿಂದ 2021 ರವರೆಗೆ 10 ವರ್ಷಗಳ ಕಾಲ ಕೋಲ್ಕತ್ತಾದ ಐಟಿಸಿ-ಸಂಗೀತ ಸಂಶೋಧನಾ ಅಕಾಡೆಮಿಯಲ್ಲಿ ಬೋಧನಾ ಅಧ್ಯಾಪಕರಾಗಿ ಸೇವೆ ಸಲ್ಲಿಸಿದವರು. ಅಮೆರಿಕ ಸಂಯುಕ್ತ ಸಂಸ್ಥಾನ, ಕೆನಡಾ, ಸಿಂಗಾಪುರ, ಬಾಂಗ್ಲಾ ದೇಶಗಳಲ್ಲಿ ಕಾರ್ಯ ನೀಡಿ ಖ್ಯಾತಿ ಪಡೆದವರು. ಉತ್ಸವದಲ್ಲಿ ಅಕ್ಷಯ ಜೋಶಿ ಧಾರವಾಡ್ ತಬಲಾ ಮತ್ತು ಸತೀಶ್ ಭಟ್ ಹೆಗ್ಗಾರ್ ಹಾರ್ಮೊನಿಯಂ ಸಾಥ್ ನೀಡಲಿದ್ದಾರೆ ಎಂದು ಕಲಾ ಸಾಧನ ಕೇಂದ್ರದ ನಿರ್ದೇಶಕಿ ವಿಭಾ ಶ್ರೀನಿವಾಸ ನಾಯಕ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ನೆರವೇರಿಸಲಿದ್ದಾರೆ.
ಪತ್ರಿಕಾಗೋಷ್ಠಿ ಯಲ್ಲಿ ಸಂಸ್ಥೆಯ ಗೌರವ ಸಲಹೆಗಾರ ಶ್ರೀನಿವಾಸ್ ನಾಯಕ್ ಇಂದಾಜೆ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು