9:17 AM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

Mangaluru | ಆ.10: ಕಲಾಸಾಧನದಿಂದ ‘ಸ್ವರಧಾರ’ ಸಂಗೀತ ಉತ್ಸವ

08/08/2025, 22:16

ಮಂಗಳೂರು(reporterkarnataka.com): ಮಂಗಳೂರು ಕಲಾ ಸಾಧನ ವತಿಯಿಂದ
ಸ್ವರಧಾರಾ ಸಂಗೀತ ಉತ್ಸವ ಆ.10ರಂದು ಸಂಜೆ 5 ಗಂಟೆಯಿಂದ ನಗರದ ಓಶಿಯನ್ ಪರ್ಲ್ ಸಭಾಂಗಣದಲ್ಲಿ ನಡೆಯಲಿದೆ.
ಉತ್ಸವದಲ್ಲಿ ಪ್ರಸಿದ್ಧ ಹಿಂದೂಸ್ತಾನಿ ಗಾಯಕ ಸಂಗೀತ ನಾಟಕ ಅಕಾಡೆಮಿ ನವದೆಹಲಿಯಿಂದ ಭಾರತರತ್ನ ಉಸ್ತಾದ್ ಬಿಸ್ಮಿಲ್ಲಾ ಖಾನ್, ಯುವ ಪುರಸ್ಕಾರ ಪಂಡಿತ್ ಕುಮಾರ್ ಮರ್ದೂರ್ ಭಾಗವಹಿಸಲಿದ್ದಾರೆ. ಕುಮಾರ್ ಅವರು ಕಿರಾಣಾ, ಗ್ವಾಲಿಯರ್ ಮತ್ತು ಜೈಪುರ ಘರಾಣೆಗಳ ಶೈಲಿಗಳನ್ನು ಬೆರೆಸಿ ತಮ್ಮದೇ ಆದ ಗಾಯನವನ್ನು ರಚಿಸಿ ದೇಶ ವಿದೇಶಗಳಲ್ಲಿ ಖ್ಯಾತಿ ಪಡೆದವರು. ಖ್ಯಾತ ಹಿಂದೂಸ್ತಾನಿ ಗಾಯಕ ಪಂಡಿತ್ ಸೋಮನಾಥ ಮರ್ದೂರರ ಫುತ್ರ.


ಕುಮಾರ್ 2011ರಿಂದ 2021 ರವರೆಗೆ 10 ವರ್ಷಗಳ ಕಾಲ ಕೋಲ್ಕತ್ತಾದ ಐಟಿಸಿ-ಸಂಗೀತ ಸಂಶೋಧನಾ ಅಕಾಡೆಮಿಯಲ್ಲಿ ಬೋಧನಾ ಅಧ್ಯಾಪಕರಾಗಿ ಸೇವೆ ಸಲ್ಲಿಸಿದವರು. ಅಮೆರಿಕ ಸಂಯುಕ್ತ ಸಂಸ್ಥಾನ, ಕೆನಡಾ, ಸಿಂಗಾಪುರ, ಬಾಂಗ್ಲಾ ದೇಶಗಳಲ್ಲಿ ಕಾರ್ಯ ನೀಡಿ ಖ್ಯಾತಿ ಪಡೆದವರು. ಉತ್ಸವದಲ್ಲಿ ಅಕ್ಷಯ ಜೋಶಿ ಧಾರವಾಡ್ ತಬಲಾ ಮತ್ತು ಸತೀಶ್ ಭಟ್ ಹೆಗ್ಗಾರ್ ಹಾರ್ಮೊನಿಯಂ ಸಾಥ್ ನೀಡಲಿದ್ದಾರೆ ಎಂದು ಕಲಾ ಸಾಧನ ಕೇಂದ್ರದ ನಿರ್ದೇಶಕಿ ವಿಭಾ ಶ್ರೀನಿವಾಸ ನಾಯಕ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ನೆರವೇರಿಸಲಿದ್ದಾರೆ.
ಪತ್ರಿಕಾಗೋಷ್ಠಿ ಯಲ್ಲಿ ಸಂಸ್ಥೆಯ ಗೌರವ ಸಲಹೆಗಾರ ಶ್ರೀನಿವಾಸ್ ನಾಯಕ್ ಇಂದಾಜೆ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು