2:59 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಮಂಗಳೂರು ಆಟೋ ಬ್ಲಾಸ್ಟ್ ಆರೋಪಿಯ ಮಾಹಿತಿ ಲಭ್ಯ: ಶಿವಮೊಗ್ಗ ತುಂಗಾ ಸ್ಫೋಟಕ್ಕೆ ನಂಟು

20/11/2022, 23:05

ಮಂಗಳೂರು(reporterkarnataka.com): ನಗರದ ನಾಗೂರಿ ಬಳಿ ಶನಿವಾರ ಮುಸ್ಸಂಜೆ ವೇಳೆ ನಡೆದ ಆಟೋರಿಕ್ಷಾ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿ ಲಭಿಸುತ್ತಿದ್ದು, ಶಿವಮೊಗ್ಗ ತುಂಗಾ ನದಿ ದಡದಲ್ಲಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಕುಖ್ಯಾತ ಕ್ರಿಮಿನಲ್ ಶಾರೀಕ್ ಎಂಬಾತನೇ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಮಾಡಿರುವುದು ಎಂಬ ಅಚ್ಚರಿಯ ಮಾಹಿತಿ ಲಭ್ಯವಾಗಿದೆ.

ಮಂಗಳೂರಿನಲ್ಲಿ ಆಟೋದಲ್ಲಿ ಸ್ಫೋಟ ಮಾಡಿದ್ದ ವ್ಯಕ್ತಿ ನಕಲಿ ಆಧಾರ್ ವಿಳಾಸ ನೀಡಿದ್ದು ಸ್ಪಷ್ಟವಾಗುತ್ತಿದ್ದಂತೆ ಆರೋಪಿಯ ಬೆನ್ನು ಹತ್ತಿದ ಪೊಲೀಸರು ಕೊನೆಗೂ ಆತ ಯಾರು ಎಂಬುದನ್ನು ಪತ್ತೆ ಹಚ್ಚಿದ್ದಾರೆ.

ಇತ್ತೀಚೆಗೆ ತುಂಗಾ ನದಿಯ ತಟದಲ್ಲಿ ಬಾಂಬ್ ಸ್ಫೋಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ಸೆಪ್ಟೆಂಬರ್ 19 ರಂದು ಸಿದ್ದೇಶ್ವರ ನಗರ ನಿವಾಸಿಯಾದ ಸೈಯದ್ ಯಾಸಿನ್(21) ಮತ್ತು ಮಂಗಳೂರಿನ ಮಾಜ್ ಮುನೀ‌ನ(22) ಎಂಬವರನ್ನು
ಬಂಧಿಸಿದ್ದರು. ಆದರೆ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ತೀರ್ಥಹಳ್ಳಿಯ ಸೊಪ್ಪುಗುಡ್ಡೆ ಮೂಲದ ಶಾರೀಕ್ ನಾಪತ್ತೆಯಾಗಿದ್ದ.
ನಾಪತ್ತೆಯಾಗಿದ್ದ ಈತನ ಬಂಧನಕ್ಕೆ ಪೊಲೀಸರು ಸಾಕಷ್ಟು ಬಲೆ ಬೀಸಿದ್ದರೂ, ತನಿಖೆ ನಡೆಸಿದ್ದರೂ ಸಿಕ್ಕಿ ಬಿದ್ದಿರಲಿಲ್ಲ. ಆದರೆ ಈಗ ಮಂಗಳೂರಿನಲ್ಲಿ ಆಟೋ ಸ್ಫೋಟ ಪ್ರಕರಣದ ಮೂಲಕ ಸಿಕ್ಕಿ ಬಿದ್ದಿದ್ದಾನೆ.

ಸ್ಫೋಟಗೊಂಡು ಗಂಭೀರ ಗಾಯಗೊಂಡಿದ್ದ ಶಾರೀಕ್‌ಗೆ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೊಬೈಲ್, ವಾಟ್ಸಪ್ ಮೂಲಕ ಸಂವಹನ ನಡೆಸದೇ ಟೆಲಿಗ್ರಾಮ್, ಸಿಗ್ನಲ್ ಇತ್ಯಾದಿ ಮೆಸೆಂಜರ್ ಆಪ್ ಇವರು ಬಳಸುತ್ತಿದ್ದರು. ಯಾಸಿನ್ ಮತ್ತು ಮಾಜ್ ಮುನೀರ್ ಪಿಯುಸಿ ಸ್ನೇಹಿತರು. ಇವರ ಜೊತೆ ಶಾರೀಕ್ ಐಪಿಸ್ ಚಟುವಟಿಕೆಯ ಬಗ್ಗೆ ಮಾಹಿತಿ ಕಳುಹಿಸುತ್ತಿದ್ದ ಆರೋಪಿಗಳ ಬಾಂಬ್ ತಯಾರಿಸುವ ಪಿಡಿಎಫ್ ಫೈಲ್, ಐಸಿಸ್ ಉಗ್ರರು ತಲೆ ಕಡಿಯುವ ಮತ್ತು ಜೀವಂತವಾಗಿ ಸುಡುವ ವೀಡಿಯೋಗಳು ಲಭ್ಯವಾಗಿದೆ.

ಇವರು ಐಸಿಸ್ ಜೊತೆ ನೇರವಾಗಿ ಸಂವಹನ ನಡೆಸಿರಲಿಲ್ಲ. ಆದರೆ ಐಸಿಸ್ ಟೆಲಿಗ್ರಾಮ್ ಚಾನೆಲ್‌ನ ಸದಸ್ಯರಾಗಿದ್ದರು ಎನ್ನಲಾಗಿದೆ.

ಇದೀಗ ಅಮದು ನಡೆದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಾರಿಕ್
ಇದೀಗ ನಿನ್ನೆ ನಡೆದ ಆಟೋ ಬಾಂಬ್ ಸ್ಫೋಟ ಪ್ರಕರಣದಲ್ಲಿ ತಾನಾಗಿಯೇ ಕೈ ಪ್ರಯಾಣಿಕನಾಗಿ ಬಂದಿದ್ದವನು ಇವನೇ ಎಂದು ಹೇಳಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು