5:30 PM Monday30 - March 2026
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ

ಇತ್ತೀಚಿನ ಸುದ್ದಿ

ಮಂಗಳೂರು: ಆಟೋ ಸ್ಫೋಟ ಸ್ಥಳಕ್ಕೆ ಎಡಿಜಿಪಿ ಅಲೋಕ್ ​​ಕುಮಾರ್ ಭೇಟಿ‌; ಮಾಧ್ಯಮಕ್ಕೆ ಅವರು ಹೇಳಿದ್ದೇನು ?

21/11/2022, 13:49

ಮಂಗಳೂರು(reporterkarnataka.com); ನಗರದ ನಾಗೂರಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಆಟೋ ರಿಕ್ಷಾ ಸ್ಫೋಟದ ಸ್ಥಳಕ್ಕೆ ಎಡಿಜಿಪಿ ಅಲೋಕ್ ​​ಕುಮಾರ್ ಭೇಟಿ‌ ನೀಡಿ‌ ಪರಿಶೀಲನೆ ನಡೆಸಿದ್ದಾರೆ.

ಶಂಕಿತ ಆರೋಪಿಯ ಗುರುತು ಪತ್ತೆ ಹಚ್ಚುವ ನಿಟ್ಟಿನಲ್ಲಿ ಸಂಬಂಧಿಕರಿಗೆ ತಿಳಿಸಿದ್ದೇವೆ. ಇಂದು ಸಂಬಂಧಿಕರು ನಗರಕ್ಕೆ ಆಗಮಿಸಬಹುದು, ಶಂಕಿತ ವ್ಯಕ್ತಿ ಯಾರನ್ನು ಭೇಟಿ ಮಾಡಿದ್ದಾನೆ ಎಂಬುದನ್ನು ಪತ್ತೆ ಹಚ್ಚಲು ಹೆಚ್ಚಿನ ತನಿಖೆ ನಡೆಸಬೇಕಾಗಿದೆ ಎಂದು ಅಲೋಕ್ ಕುಮಾರ್ ಹೇಳಿದರು.
ಸ್ಫೋಟ ನಡೆಸಿದಾತ ಎನ್ನಲಾದ ವ್ಯಕ್ತಿಗೆ ಶೇ.45 ರಷ್ಟು ಗಾಯವಾಗಿದೆ. ಕೈ ಸನ್ನೆಯಲ್ಲಿ ಆತ ಉತ್ತರಿಸುತ್ತಿದ್ದಾನೆ. ಪಂಪ್ ವೆಲ್ ಗೆ ಹೋಗಲು ಆಟೋ ಬುಕ್ ಮಾಡಿದ್ದಾಗಿ ಹೇಳಿರುವುದಾಗಿ ಅಲೋಕ್ ಕುಮಾರ್ ನುಡಿದರು.
ಆತ ಬೇರೆಡೆ ಹೋಗಿ ಬ್ಲಾಸ್ಟ್​​ ಮಾಡುವ ಉದ್ದೇಶ ಹೊಂದಿದ್ದ. ಆದರೆ ಆಕಸ್ಮಿಕವಾಗಿ ಆಟೋದಲ್ಲಿ ಬಾಂಬ್​ ಬ್ಲಾಸ್ಟ್​​ ಆಗಿದೆ ಎಂದು ಎಡಿಜಿಪಿ
ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು