1:23 PM Sunday16 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಮಂಗಳೂರು: ಭಾರೀ ಗಾಳಿ ಮಳೆಗೆ ಬಿಕರ್ಣಕಟ್ಟೆ ಸಮೀಪ ಉರುಳಿ ಬಿದ್ದ ಬೃಹತ್ ಹೋರ್ಡಿಂಗ್ಸ್; ಪಡೀಲ್ ನಲ್ಲಿ ಹೊಸ ಡಿಸಿ ಕಚೇರಿಗೆ ನೆರೆ!

05/07/2023, 15:18

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com
ಕರಾವಳಿಯಲ್ಲಿ ಇಂದು ಕೂಡ ಬಿರುಸಿನ ಮಳೆ ಮುಂದುವರಿದಿದ್ದು, ಬುಧವಾರ ಸುರಿದ ಭಾರೀ ಮಳೆಗೆ ನಗರದ ಹಲವೆಡೆ ಆವಾಂತರ ಸೃಷ್ಟಿ ಯಾಗಿದೆ.


ಬುಧವಾರ ಬೆಳಗ್ಗಿನ ನಂತರ ಸುರಿದ ಭಾರೀ ಗಾಳಿ ಮಳೆಗೆ ನಗರದ ಹಲವೆಡೆ ವಿದ್ಯುತ್ ಕಂಬ, ಬೃಹತ್ ಹೋರ್ಡಿಂಗ್ಸ್ ಧರಾಶಾಹಿಯಾಗಿದೆ. ನಗರದ ಬಿಕರ್ಣಕಟ್ಟೆ ಬಳಿ ಬೃಹತ್ ಹೋರ್ಡಿಂಗ್ಸ್ ಗಾಳಿ ಮಳೆಯ ಅಬ್ಬರಕ್ಕೆ ನೆಲಕ್ಕಪ್ಪಳಿಸಿದೆ. ಇದರಿಂದ ಹಲವು ವಾಹನಗಳು ಜಖಂಗೊಂಡಿವೆ. ಅದೃಷ್ಟವಶಾತ್ ಯಾರೂ ಇಲ್ಲದಿರುವುದರಿಂದ ಪ್ರಾಣಾಪಾಯ ತಪ್ಪಿದೆ. ನಂತೂರು- ಪಡೀಲ್ ರಸ್ತೆಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಪಡೀಲ್ ಸಮೀಪ ನಿರ್ಮಿಸಿದ ನೂತನ ಜಿಲ್ಲಾಧಿಕಾರಿ ಕಚೇರಿ ಮಂಭಾಗದಲ್ಲಿ ನೆರೆ ಬಂದಿದೆ. ಕದ್ರಿ ಕೈಬಟ್ಟಲ್ ನಲ್ಲಿ ವಿದ್ಯುತ್ ಕಂಬ ಉರುಳಿ ಬಿದ್ದಿದೆ. ಮೆಸ್ಕಾಂ ವಿದ್ಯುತ್ ತಂತಿ ತುಂಡಾಗಿ ನೆಲಕ್ಕೆ ಬಿದ್ದಿವೆ. ನಗರದ ಪಿವಿಎಸ್ ಬಳಿಯ ಖೈಬರ್ ಪಾಸ್ ನ ಗುಡ್ಡ ಕುಸಿದಿದೆ. ಹಂಪನಕಟ್ಟೆಯ ಸಿಗ್ನಲ್ ಕೆಟ್ಟು ಹೋಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು