1:37 PM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

Mangaluru | ದೇಶ, ಆಹಾರದ ಭದ್ರತೆಗೆ ಹೋರಾಡಿದ ಮಹಾನ್ ನಾಯಕ ಬಾಬೂಜಿ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

05/04/2025, 23:59

ಮಂಗಳೂರು(reporterkarnataka.com): ದೇಶದ ಆಂತರಿಕ ಮತ್ತು ಬಾಹ್ಯ ಭದ್ರತೆ ಹಾಗೂ ನಾಗರಿಕರಿಗೆ ಆಹಾರ ಭದ್ರತೆಗಾಗಿ ಅಹರ್ನಿಶಿ ದುಡಿದ ಮಹಾನ್ ವ್ಯಕ್ತಿ ಡಾ. ಬಾಬು ಜಗಜೀವನ್ ರಾಂ ರವರು ಆಗಿದ್ದಾರೆ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಅವರು ಶನಿವಾರ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಂರವರ 118ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ದೇಶದ ಕೃಷಿ ಸಚಿವರಾಗಿ ಬಾಬೂಜಿಯವರು ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರ ಹಸಿರು ಕ್ರಾಂತಿಯ ಯೋಜನೆಗೆ ಬೆನ್ನೆಲುಬಾಗಿ ನಿಂತು ದೇಶದ ಕೃಷಿ ಕ್ಷೇತ್ರದಲ್ಲಿ ಅದ್ಭುತ ಪ್ರಗತಿಗೆ ಕಾರಣರಾಗಿದ್ದಾರೆ. ಆಹಾರಕ್ಕಾಗಿ ನಾಗರಿಕರು ಸಂಕಟಪಡುತ್ತಿದ್ದ ಕಾಲವನ್ನು ಆಹಾರ ಧಾನ್ಯಗಳ ಹೆಚ್ಚುವರಿ ಸಂಗ್ರಹವಾಗಿ ಪರಿವರ್ತಿಸಲು ಬಾಬೂಜಿ ಸೇವೆ ಸಲ್ಲಿಸಿದ್ದಾರೆ ಎಂದು ಉಸ್ತುವಾರಿ ಸಚಿವರು ಸ್ಮರಿಸಿದರು.
ಕೇಂದ್ರ ರಕ್ಷಣಾ ಸಚಿವರಾಗಿ ಬಾಪೂಜಿಯವರು ದೇಶದ ಗಡಿಗಳನ್ನು ಬಾಹ್ಯ ಬೆದರಿಕೆಯಿಂದ ಮುಕ್ತಗೊಳಿಸಿದರು. ವಿಶೇಷವಾಗಿ ಬಾಂಗ್ಲಾ ಯುದ್ಧ ಸಂದರ್ಭದಲ್ಲಿ ಅವರ ನಾಯಕತ್ವ ದೇಶದ ರಕ್ಷಣೆಗೆ ಸಾಕಷ್ಟು ಪರಿಣಾಮ ಬೀರಿತು. ಕಾರ್ಮಿಕ ಸಚಿವರಾಗಿಯೂ ಸೇವೆ ಸಲ್ಲಿಸಿದ ಬಾಪೂಜಿಯವರು ಇಎಸ್‍ಐ ವ್ಯವಸ್ಥೆಯನ್ನು ಜಾರಿಗೆ ತರಲು ಶ್ರಮಿಸಿದರು. ಅಲ್ಲದೆ ಹಲವಾರು ಕಾರ್ಮಿಕಪರ ಕಾನೂನುಗಳನ್ನು ಜಾರಿಗೆ ತರಲು ಶ್ರಮಿಸಿದರು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಸಮಾರಂಭದಲ್ಲಿ ಮೀನುಗಾರಿಕೆ ಕಾಲೇಜಿನ ಪ್ರಾಧ್ಯಾಪಕ ಡಾ.ಶಿವಕುಮಾರ್ ಮಗದ ಅವರು ವಿಶೇಷ ಉಪನ್ಯಾಸ ನೀಡಿದರು.
ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಮತ್ತಿತರರು ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಡಾ. ಬಿ. ಎಸ್. ಹೇಮಲತಾ ಸ್ವಾಗತಿಸಿ, ಸಹಾಯಕ ನಿರ್ದೇಶಕ ಸುರೇಶ್ ಅಡಿಗ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು