9:08 PM Thursday13 - August 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ

ಇತ್ತೀಚಿನ ಸುದ್ದಿ

Mangaluru | ದೇಶ, ಆಹಾರದ ಭದ್ರತೆಗೆ ಹೋರಾಡಿದ ಮಹಾನ್ ನಾಯಕ ಬಾಬೂಜಿ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

05/04/2025, 23:59

ಮಂಗಳೂರು(reporterkarnataka.com): ದೇಶದ ಆಂತರಿಕ ಮತ್ತು ಬಾಹ್ಯ ಭದ್ರತೆ ಹಾಗೂ ನಾಗರಿಕರಿಗೆ ಆಹಾರ ಭದ್ರತೆಗಾಗಿ ಅಹರ್ನಿಶಿ ದುಡಿದ ಮಹಾನ್ ವ್ಯಕ್ತಿ ಡಾ. ಬಾಬು ಜಗಜೀವನ್ ರಾಂ ರವರು ಆಗಿದ್ದಾರೆ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಅವರು ಶನಿವಾರ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಂರವರ 118ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ದೇಶದ ಕೃಷಿ ಸಚಿವರಾಗಿ ಬಾಬೂಜಿಯವರು ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರ ಹಸಿರು ಕ್ರಾಂತಿಯ ಯೋಜನೆಗೆ ಬೆನ್ನೆಲುಬಾಗಿ ನಿಂತು ದೇಶದ ಕೃಷಿ ಕ್ಷೇತ್ರದಲ್ಲಿ ಅದ್ಭುತ ಪ್ರಗತಿಗೆ ಕಾರಣರಾಗಿದ್ದಾರೆ. ಆಹಾರಕ್ಕಾಗಿ ನಾಗರಿಕರು ಸಂಕಟಪಡುತ್ತಿದ್ದ ಕಾಲವನ್ನು ಆಹಾರ ಧಾನ್ಯಗಳ ಹೆಚ್ಚುವರಿ ಸಂಗ್ರಹವಾಗಿ ಪರಿವರ್ತಿಸಲು ಬಾಬೂಜಿ ಸೇವೆ ಸಲ್ಲಿಸಿದ್ದಾರೆ ಎಂದು ಉಸ್ತುವಾರಿ ಸಚಿವರು ಸ್ಮರಿಸಿದರು.
ಕೇಂದ್ರ ರಕ್ಷಣಾ ಸಚಿವರಾಗಿ ಬಾಪೂಜಿಯವರು ದೇಶದ ಗಡಿಗಳನ್ನು ಬಾಹ್ಯ ಬೆದರಿಕೆಯಿಂದ ಮುಕ್ತಗೊಳಿಸಿದರು. ವಿಶೇಷವಾಗಿ ಬಾಂಗ್ಲಾ ಯುದ್ಧ ಸಂದರ್ಭದಲ್ಲಿ ಅವರ ನಾಯಕತ್ವ ದೇಶದ ರಕ್ಷಣೆಗೆ ಸಾಕಷ್ಟು ಪರಿಣಾಮ ಬೀರಿತು. ಕಾರ್ಮಿಕ ಸಚಿವರಾಗಿಯೂ ಸೇವೆ ಸಲ್ಲಿಸಿದ ಬಾಪೂಜಿಯವರು ಇಎಸ್‍ಐ ವ್ಯವಸ್ಥೆಯನ್ನು ಜಾರಿಗೆ ತರಲು ಶ್ರಮಿಸಿದರು. ಅಲ್ಲದೆ ಹಲವಾರು ಕಾರ್ಮಿಕಪರ ಕಾನೂನುಗಳನ್ನು ಜಾರಿಗೆ ತರಲು ಶ್ರಮಿಸಿದರು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಸಮಾರಂಭದಲ್ಲಿ ಮೀನುಗಾರಿಕೆ ಕಾಲೇಜಿನ ಪ್ರಾಧ್ಯಾಪಕ ಡಾ.ಶಿವಕುಮಾರ್ ಮಗದ ಅವರು ವಿಶೇಷ ಉಪನ್ಯಾಸ ನೀಡಿದರು.
ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಮತ್ತಿತರರು ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಡಾ. ಬಿ. ಎಸ್. ಹೇಮಲತಾ ಸ್ವಾಗತಿಸಿ, ಸಹಾಯಕ ನಿರ್ದೇಶಕ ಸುರೇಶ್ ಅಡಿಗ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು