10:15 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಮಂಗಳೂರು ಬಂದ್: ವಾಹನ ಸಂಚಾರ ಸ್ಥಗಿತ: ಎಡಿಜಿಪಿ ಆಗಮನ; ಬಿಗಿ ಬಂದೋಬಸ್ತ್

02/05/2025, 10:27

ಮಂಗಳೂರು(reporterkarnataka.com): ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಕರೆ ನೀಡಿರುವ ಬಂದ್ ಹಿನ್ನೆಲೆಯಲ್ಲಿ ಮಂಗಳೂರು ನಗರ ಸೇರಿದಂತೆ ದ.ಕ‌‌. ಜಿಲ್ಲೆಯ ಬಹುತೇಕ ಕಡೆ ಅಂಗಡಿ ಮುಂಗಟ್ಟು ಮುಚ್ಚಿ ಬಂದ್ ಆಚರಿಸಲಾಯಿತು.
ಈ ಮಧ್ಯೆ ಕಾನೂನು ಸುವ್ಯವಸ್ಥೆಯ ಎಡಿಜಿಪಿ ಆರ್. ಹಿತೇಂದ್ರ ಮಂಗಳೂರಿಗೆ ಆಗಮಿಸಿದ್ದಾರೆ.

ನಗರದಲ್ಲಿ ಖಾಸಗಿ ಬಸ್, ಆಟೋ, ಟ್ಯಾಕ್ಸಿ ರೋಡಿಗೆ ಇಳಿದಿಲ್ಲ. ಕೆಎಸ್ಸಾರ್ಟಿಸಿ ಬಸ್ ಸಂಚಾರ ಬೆಳಗ್ಗೆ ಆರಂಭವಾದರೂ ನಂತರ ನಿಲ್ಲಿಸಲಾಯಿತು. ಖಾಸಗಿ ವಾಹನಗಳು ಬೆರಳೆಣಿಕೆ ಸಂಖ್ಯೆಯಲ್ಲಿ ಓಡಾಟ ನಡೆಸುತ್ತಿದ್ದವು. ಹೊರ ಜಿಲ್ಲೆಗಳಿಂದ ಮಂಗಳೂರು ನಗರದೊಳಗೆ ಪ್ರವೇಶಿಸುವ ಕೆಎಸ್ಸಾರ್ಟಿಸಿ ಬಸ್ ಗಳನ್ನು ಪಡೀಲ್ ಬಳಿ ತಡೆಯಲಾಯಿತು. ಈ ಹಿನ್ನೆಲೆಯಲ್ಲಿ ನಂತರ ಬಂದ ಕೆಎಸ್ಸಾರ್ಟಿಸಿ ಬಸ್ ಗಳನ್ನು ಬಿ.ಸಿ. ರೋಡಿನಲ್ಲೇ ತಂಗಬೇಕಾಯಿತು.
ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು