6:51 PM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಮಂಗಳೂರು ಬಂದ್: ವಾಹನ ಸಂಚಾರ ಸ್ಥಗಿತ: ಎಡಿಜಿಪಿ ಆಗಮನ; ಬಿಗಿ ಬಂದೋಬಸ್ತ್

02/05/2025, 10:27

ಮಂಗಳೂರು(reporterkarnataka.com): ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಕರೆ ನೀಡಿರುವ ಬಂದ್ ಹಿನ್ನೆಲೆಯಲ್ಲಿ ಮಂಗಳೂರು ನಗರ ಸೇರಿದಂತೆ ದ.ಕ‌‌. ಜಿಲ್ಲೆಯ ಬಹುತೇಕ ಕಡೆ ಅಂಗಡಿ ಮುಂಗಟ್ಟು ಮುಚ್ಚಿ ಬಂದ್ ಆಚರಿಸಲಾಯಿತು.
ಈ ಮಧ್ಯೆ ಕಾನೂನು ಸುವ್ಯವಸ್ಥೆಯ ಎಡಿಜಿಪಿ ಆರ್. ಹಿತೇಂದ್ರ ಮಂಗಳೂರಿಗೆ ಆಗಮಿಸಿದ್ದಾರೆ.

ನಗರದಲ್ಲಿ ಖಾಸಗಿ ಬಸ್, ಆಟೋ, ಟ್ಯಾಕ್ಸಿ ರೋಡಿಗೆ ಇಳಿದಿಲ್ಲ. ಕೆಎಸ್ಸಾರ್ಟಿಸಿ ಬಸ್ ಸಂಚಾರ ಬೆಳಗ್ಗೆ ಆರಂಭವಾದರೂ ನಂತರ ನಿಲ್ಲಿಸಲಾಯಿತು. ಖಾಸಗಿ ವಾಹನಗಳು ಬೆರಳೆಣಿಕೆ ಸಂಖ್ಯೆಯಲ್ಲಿ ಓಡಾಟ ನಡೆಸುತ್ತಿದ್ದವು. ಹೊರ ಜಿಲ್ಲೆಗಳಿಂದ ಮಂಗಳೂರು ನಗರದೊಳಗೆ ಪ್ರವೇಶಿಸುವ ಕೆಎಸ್ಸಾರ್ಟಿಸಿ ಬಸ್ ಗಳನ್ನು ಪಡೀಲ್ ಬಳಿ ತಡೆಯಲಾಯಿತು. ಈ ಹಿನ್ನೆಲೆಯಲ್ಲಿ ನಂತರ ಬಂದ ಕೆಎಸ್ಸಾರ್ಟಿಸಿ ಬಸ್ ಗಳನ್ನು ಬಿ.ಸಿ. ರೋಡಿನಲ್ಲೇ ತಂಗಬೇಕಾಯಿತು.
ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು