4:40 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

ಮಂಗಳೂರು ಬಂದ್: ವಾಹನ ಸಂಚಾರ ಸ್ಥಗಿತ: ಎಡಿಜಿಪಿ ಆಗಮನ; ಬಿಗಿ ಬಂದೋಬಸ್ತ್

02/05/2025, 10:27

ಮಂಗಳೂರು(reporterkarnataka.com): ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಕರೆ ನೀಡಿರುವ ಬಂದ್ ಹಿನ್ನೆಲೆಯಲ್ಲಿ ಮಂಗಳೂರು ನಗರ ಸೇರಿದಂತೆ ದ.ಕ‌‌. ಜಿಲ್ಲೆಯ ಬಹುತೇಕ ಕಡೆ ಅಂಗಡಿ ಮುಂಗಟ್ಟು ಮುಚ್ಚಿ ಬಂದ್ ಆಚರಿಸಲಾಯಿತು.
ಈ ಮಧ್ಯೆ ಕಾನೂನು ಸುವ್ಯವಸ್ಥೆಯ ಎಡಿಜಿಪಿ ಆರ್. ಹಿತೇಂದ್ರ ಮಂಗಳೂರಿಗೆ ಆಗಮಿಸಿದ್ದಾರೆ.

ನಗರದಲ್ಲಿ ಖಾಸಗಿ ಬಸ್, ಆಟೋ, ಟ್ಯಾಕ್ಸಿ ರೋಡಿಗೆ ಇಳಿದಿಲ್ಲ. ಕೆಎಸ್ಸಾರ್ಟಿಸಿ ಬಸ್ ಸಂಚಾರ ಬೆಳಗ್ಗೆ ಆರಂಭವಾದರೂ ನಂತರ ನಿಲ್ಲಿಸಲಾಯಿತು. ಖಾಸಗಿ ವಾಹನಗಳು ಬೆರಳೆಣಿಕೆ ಸಂಖ್ಯೆಯಲ್ಲಿ ಓಡಾಟ ನಡೆಸುತ್ತಿದ್ದವು. ಹೊರ ಜಿಲ್ಲೆಗಳಿಂದ ಮಂಗಳೂರು ನಗರದೊಳಗೆ ಪ್ರವೇಶಿಸುವ ಕೆಎಸ್ಸಾರ್ಟಿಸಿ ಬಸ್ ಗಳನ್ನು ಪಡೀಲ್ ಬಳಿ ತಡೆಯಲಾಯಿತು. ಈ ಹಿನ್ನೆಲೆಯಲ್ಲಿ ನಂತರ ಬಂದ ಕೆಎಸ್ಸಾರ್ಟಿಸಿ ಬಸ್ ಗಳನ್ನು ಬಿ.ಸಿ. ರೋಡಿನಲ್ಲೇ ತಂಗಬೇಕಾಯಿತು.
ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು