8:31 AM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

Mangaluru | ದ್ವೇಷರಹಿತ ಸಮಾಜಕ್ಕೆ ಬಸವಣ್ಣ ಸಂದೇಶ ಅಗತ್ಯ: ಜಿಪಂ ಸಿಇಓ ಡಾ.ಕೆ.ಆನಂದ್

30/04/2025, 20:23

ಮಂಗಳೂರು(reporterkarnataka.com): ಎಲ್ಲರೂ ಸಮಾನರಾಗಿ ಬಾಳಿ ಬದುಕಿ, ಸಂಘರ್ಷರಹಿತ ಮತ್ತು ದ್ವೇಷರಹಿತ ಸಮಾಜ ನಿರ್ಮಾಣಕ್ಕೆ ಬಸವೇಶ್ವರರ ಸಂದೇಶ ಇಂದಿನ ಅಗತ್ಯವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಆನಂದ್ ಹೇಳಿದ್ದಾರೆ.
ಅವರು ಬುಧವಾರ ತುಳುಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂಖದ ಕರಾವಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದ ಸಹಕಾರದೊಂದಿಗೆ ನಡೆದ ಶ್ರೀ ಬಸವೇಶ್ವರರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಸವಣ್ಣನವರ ತತ್ವಗಳು ಸದಾ ನಮ್ಮೊಂದಿಗೆ ಇರಬೇಕು. ಸಾಮಾಜಿಕ ಸಮಾನತೆಯನ್ನು ಅಂದಿನ ಕಾಲದಲ್ಲಿಯೇ ಪ್ರತಿಪಾದಿಸಿದ್ದ ಅವರು, ಮನುಷ್ಯರಲ್ಲಿ ಮೇಲು ಕೀಳು ಎಂಬ ನಿಲುವನ್ನು ಕಠುವಾಗಿ ವಿರೋಧಿಸಿದ್ದರು. ಇದುವೇ ಉತ್ತಮ ಸಮಾಜಕ್ಕೆ ಬುನಾಧಿಯಾಯಿತು ಎಂದು ಅವರು ಹೇಳಿದರು.
ಬಸವಣ್ಣನವರು ಸಂಸ್ಥಾಪಿಸಿದ್ದ ಅನುಭವ ಮಂಟಪವು ಜಗತ್ತಿನ ಮೊದಲ ಸಂಸತ್ ಎಂದೇ ಪ್ರಸಿದ್ಧಿಯಾಗಿದೆ. ಇದು ಸಂಸದೀಯ ವ್ಯವಸ್ಥೆಗೆ ದೊಡ್ಡ ಕೊಡುಗೆ ನೀಡಿತು. ಶ್ರಮ ಮತ್ತು ಸೇವೆಯ ಮೇಲೆ ಅಪಾರ ನಂಬಿಕೆ ಇಟ್ಟಿದ್ದ ಅವರು, ಸಮಾಜದ ಪ್ರಗತಿಗೆ ಇದು ಪ್ರಮುಖ ಆಧಾರ ಎಂದು ಪ್ರತಿಪಾದಿಸಿದ್ದರು ಎಂದು ಜಿಪಂ ಸಿಇಓ ತಿಳಿಸಿದರು.
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ ಅವರು ಕಾರ್ಯಕ್ರಮ ಉದ್ಘಾಟಿಸಿದರು. ನಿವೃತ್ತ ಪ್ರಾಂಶುಪಾಲ ಡಾ. ಪೂವಪ್ಪ ಕಣಿಯೂರು ಅವರು ಉಪನ್ಯಾಸ ನೀಡಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ, ಕರಾವಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಚ್.ಎಸ್. ಗುರುಮೂರ್ತಿ ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ. ಸ್ವಾಗತಿಸಿದರು. ರೇಣುಕಾ ಕಣಿಯೂರು ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು