1:51 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಮಂಗಳೂರು-ಬೆಂಗಳೂರು ರೈಲು ಸಂಚಾರ ಮತ್ತೆ ಆರಂಭ: ತಾತ್ಕಾಲಿಕ ವೇಗ ನಿರ್ಬಂಧ

04/08/2026, 13:29

ಸಕಲೇಶಪುರ (reporterkarnataka.com): ಮಂಗಳೂರು – ಬೆಂಗಳೂರು ರೈಲು ಮಾರ್ಗದ ಎಡಕುಮೇರಿ – ಸಿರಿಬಾಗಿಲು ನಡುವೆ ರೈಲು ಮಾರ್ಗಕ್ಕೆ ಮಣ್ಣು ಕುಸಿತ ತೆರವು ಕಾರ್ಯಾಚರಣೆ ಪೂರ್ಣಗೊಂಡಿದ್ದು, ಸೋಮವಾರ ರಾತ್ರಿ ಬಳಿಕ ರೈಲು ಸಂಚಾರ ಮರು ಆರಂಭಗೊಂಡಿದೆ.ದುರಸ್ತಿ ಕಾರ್ಯಾಚರಣೆ ಬಳಿಕ ರೈಲು ಮಾರ್ಗವನ್ನು ಸೋಮವಾರ ರಾತ್ರಿ ಸಂಚಾರಕ್ಕೆ ಸೂಕ್ತವಾಗಿದೆ ಎಂದು ಪ್ರಮಾಣೀಕರಿಸಲಾಯಿತು. ಘಟನಾ ಸ್ಥಳದಲ್ಲಿ ಸುರಕ್ಷತಾ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಗಂಟೆಗೆ 10 ಕಿ.ಮೀ. ತಾತ್ಕಾಲಿಕ ವೇಗದ ನಿರ್ಬಂಧ ಜಾರಿಯಲ್ಲಿದೆ.
ರೈಲು ಸಂಚಾರದ ಸಾಮಾನ್ಯ ವೇಳಾಪಟ್ಟಿಗಳನ್ನು ಹಂತಹಂತವಾಗಿ ಮರು ಹೊಂದಿಸಲಾಗುತ್ತದೆ, ಕೆಲ ವಿಳಂಬಗಳು ಮುಂದುವರಿದು ಬಳಿಕ ಎಂದಿನಂತೆ ರೈಲು ಸೇವೆ ಮುಂದುವರಿಯಲಿದೆ ಎಂದು ರೈಲು ಅಧಿಕಾರಿಗಳು ತಿಳಿಸಿದ್ದಾರೆ.

*ಪರೀಕ್ಷಾರ್ಥ ಎಂಜಿನ್ ಚಾಲನೆ:*
ದುರಸ್ತಿ ಕಾರ್ಯಾಚರಣೆ ಸ್ಥಳಕ್ಕೆ ಡಿಆರ್‌ಎಂ ಮುದಿತ್ ಮಿತ್ತಲ್ ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿ ಕಾರ್ಯಾಚರಣೆ ಬಗ್ಗೆ ಪರಿಶೀಲನೆ ನಡೆಸಿ ನಿರ್ದೇಶನಗಳನ್ನು ನೀಡಿದರು. ಕಾರ್ಯಾಚರಣೆ ಪೂರ್ಣವಾದ ಬಳಿಕ ಪರೀಕ್ಷಾರ್ಥ ಎಂಜಿನ್ ಓಡಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು