12:27 PM Monday6 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಮಂಗಳೂರು ಬೆಸೆಂಟ್ ಸಂಧ್ಯಾ ಕಾಲೇಜಿನಲ್ಲಿ ರಕ್ತದಾನ ಶಿಬಿರ

01/02/2022, 21:58

ಮಂಗಳೂರು(reporterkarnataka.com): ಕೋವಿಡ್ 19ರ ಮಹಾಮಾರಿಯಿಂದ ಜನರು ತತ್ತರಿಸಿ ಹೋದ ಈ ಸಂದರ್ಭದಲ್ಲಿ ರಕ್ತದಾನದಂತಹ ಮಹತ್ಕಾರ್ಯವನ್ನು ಕೈಗೊಂಡು ನೂರಾರು ಜನರ ಬಾಳಿಗೆ ಆಶಾದೀಪವಾಗಿರುವ ಬೆಸೆಂಟ್ ಸಂಧ್ಯಾ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಕಾರ್ಯ ಶ್ಲಾಘನೀಯ ಎಂದು ಮಂಗಳೂರು ನಗರಪಾಲಿಕೆಯ ಕಾರ್ಪೊರೇಟರ್ ಹಾಗೂ ಲೆಕ್ಕ ಪತ್ರ ಸ್ಥಾಯೀ ಸಮಿತಿ ಅಧ್ಯಕ್ಷ ಲೀಲಾವತಿ ಪ್ರಕಾಶ್ ಹೇಳಿದರು. 

ಅವರು ಬೆಸೆಂಟ್ ಸಂಧ್ಯಾ ಹಳೆ ವಿದ್ಯಾರ್ಥಿ ಸಂಘ (ರಿ) ಹಾಗೂ ಬೆಸೆಂಟ್ ಸಂಧ್ಯಾ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಕಸ್ತೂರ್ಬಾ ವೈದ್ಯಕೀಯ ಆಸ್ಪತ್ರೆ ಅಂಬೇಡ್ಕರ್ ವೃತ್ತ ಮಂಗಳೂರು ಇದರ ಬ್ಲಡ್ ಬ್ಯಾಂಕ್ ಇದರ ಸಹಯೋಗದೊಂದಿಗೆ ಬೆಸಂಟ್ ಸಂಧ್ಯಾ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಕಾಲೇಜಿನ ಸಂಚಾಲಕ ಗಣೇಶ ಕೃಷ್ಣ ಭಟ್ ಹಾಗೂ ಪ್ರಾಂಶುಪಾಲ ಡಾ. ಲಕ್ಷ್ಮಿ ನಾರಾಯಣ ಭಟ್ ಅವರು ಕಾರ್ಯಕ್ರಮಕ್ಕೆ ಶುಭವನ್ನು ಕೋರಿದರು. ಹಳೆ ವಿದ್ಯಾರ್ಥಿ ಪ್ರದೀಪ್ ಸ್ವಾಗತಿಸಿದರು. ಡಾ. ಸೌಮ್ಯ ಗುಪ್ತ ರಕ್ತದಾನದ ಮಹತ್ವ ಮತ್ತು ರಕ್ತದಾನಕ್ಕೆ ಯಾರು ಅರ್ಹರು ಎಂಬ ಬಗ್ಗೆ ವಿವರಿಸಿದರು.  

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಆದಿತ್ಯ ಶೆಟ್ಟಿ, ಕಾರ್ಯದರ್ಶಿ ರಾಜೇಶ್ ಮೊದಲಿಯಾರ್,  ಸಲಹೆಗಾರ ಶ್ರೀ ಗಣಪತಿ ಭಟ್ ಎಂ. ಉಪಸ್ಥಿತರಿದ್ದರು. ಪದ್ಮಜ ಪ್ರಾರ್ಥಿಸಿದರು. ಕಾರ್ಯದರ್ಶಿ ರಾಜೇಶ್ ಮೊದಲಿಯಾರ್ ವಂದಿಸಿದರು. ಯೋಗೀಶ್ ಶರ್ಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು