6:00 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಮಂಗಳೂರು: ಭಾರತ್‌ ಬಂದ್ ಬೆಂಬಲಿಸಿ  ಬಂದರು ಶ್ರಮಿಕರ‌‌ ಸಂಘದಿಂದ ಪ್ರತಿಭಟನೆ

27/09/2021, 17:16

ಮಂಗಳೂರು(reporterkarnataka.com): ದೇಶವ್ಯಾಪಿ ಭಾರತ ಬಂದ್ ಬೆಂಬಲಿಸಿ ಮಂಗಳೂರಿನ ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ಸೋಮವಾರ ಕಾರ್ಮಿಕರು ಕೆಲ‌ ಸಮಯ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು.


ಪ್ರತಿಭಟನೆ ಉದ್ದೇಶಿಸಿ‌ ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕ ಫೆಡರೇಶನ್ ರಾಜ್ಯ ಅಧ್ತಕ್ಷ ಹಾಗೂ‌ ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ.ಮಹಾಂತೇಶ ಮಾತನಾಡಿ, ಕಳೆದ‌ 10 ತಿಂಗಳಿಂದ‌ ಮೂರು ಕೃಷಿ‌ ಕಾನೂನುಗಳ ವಿರುದ್ದ ರೈತರು ದೆಹಲಿ ಸುತ್ತಮುತ್ತ ಹೋರಾಟ ನಿರತರಾಗಿದ್ದಾರೆ. ‌ಆದರೆ ನರೇಂದ್ರ‌ ಮೋದಿ‌ ನೇತೃತ್ವದ ಬಿಜೆಪಿ ಸರ್ಕಾರ ರೈತರ ಜತರ ಮಾತುಕತೆ ನಡೆಸದೆ ಹೋರಾಟವನ್ನು ಹತ್ತಿಕ್ಕಲು ಹಲವು ಯತ್ನಗಳನ್ನು ನಡೆಸಿರುವುದು ಖಂಡನಾರ್ಹ. ಈ ನೂತನ ಕೃಷಿ‌ ಕಾನೂನುಗಳು ಕೃಷಿ‌ ಕ್ಷೇತ್ರದ ಕಂಪನೀಕರಣಕ್ಕೆ ಅವಕಾಶ ನೀಡಲಿವೆ ಇದರಿಂದ ಫಲವತ್ತಾದ ಕೃಷಿ‌ಭೂಮಿ ಕಾರ್ಪೊರೇಟ್ ಕೈ ವಶವಾಗಲಿದೆ. ಇದರಿಂದ ಭವಿಷ್ಯದಲ್ಲಿ ದೇಶದಲ್ಲಿ ಆಹಾರ ಸಮಸ್ಯೆ ಎದುರಿಸಲಿದೆ. ಕೋಟ್ಯಂತರ ಜನರು ಬೆಲೆ ಏರಿಕೆ ಹಾಗೂ ಹಸಿವಿನಿಂದ 

ತತ್ತರಿಸಲಿದ್ದಾರೆ. ಹೀಗಾಗಿ ದೇಶದ‌ಭವಿಷ್ಯದ ದೃಷ್ಟಿಯಿಂದ ರೈತರ ಈ‌ ಹೋರಾಟವನ್ನು ಕಾರ್ಮಿಕರು ಬೆಂಬಲಿಸಬೇಕು ಎಂದು ಕರೆ ನೀಡಿದರು.

ಮತ್ತೊಂದು ಕಡೆ ದೇಶದಲ್ಲಿ ಜಾರಿಯಲ್ಲಿದ್ದ 29 ಕಾರ್ಮಿಕ‌ ಕಾನೂನುಗಳನ್ನು ನಾಲ್ಕು ಸಂಹಿತೆಗಳನ್ನಾಗಿ ರೂಪಿಸಿದೆ. ಇದರಿಂದ ಸ್ವಾತಂತ್ರ್ಯ ಪೂರ್ವದಿಂದಲೂ ಜಾರಿಯಲ್ಲಿದ್ದ ಹಲವು ಹಕ್ಕುಗಳು ಮತ್ತು ಸಾಮಾಜಿಕ ಸುರಕ್ಷತೆಗಳಿಂದ ಕಾರ್ಮಿಕರು ವಂಚಿತರಾಗಲಿದ್ದಾರೆ. ಈ ಹಿನ್ನಲೆಯಲ್ಲಿ ರೈತ ಕಾರ್ಮಿಕರ‌ ಈ‌ ಐಕ್ಯ ಚಳವಳಿ ‌ಮೂಲಕ ಈ ನೀತಿಗಳನ್ನು ಹಿಮ್ಮೆಟ್ಟಿಸಲು ಅವರು ಕರೆ ನೀಡಿದರು.

ಬಂದರು ಶ್ರಮಿಕರ‌ ಸಂಘದ ಅಧ್ಯಕ್ಷ

ವಿಲ್ಲಿ ವಿಲ್ಸನ್, ಕಾರ್ಯದರ್ಶಿ ಇಮ್ತೀಯಾಜ್, ಆದಿವಾಸಿ ಹಾಗೂ ದಲಿತ ಹಕ್ಕುಗಳ‌ ಸಮಿತಿಯ ಯೋಗಿಶ್ ಜಪ್ಪಿನ ಮೊಗರು, ಹರೀಶ ಕೆರೆಬೈಲ್, ಹಂಜಾ ತಂದೊಲಗಿ, ಸಿದ್ದಿಕ್ ಫಾರುಕ್ ಉಳ್ಳಾಲ, ಮಜೀದ್ ಉಳ್ಳಾಲ, ಮಾಧವ ಕಾವೂರು, ಮೊಯಿದಿನ್ ಕಲ್ಕಟ್ಟ,ಯಲ್ಲಪ್ಪ, ಡಿವೈಎಫ್ಐ ಮುಖಂಡರಾದ ಎ.ಬಿ ನೌಶಾದ್, ಹನೀಫ್ ಬೆಂಗ್ರೆ, ಅಸ್ಲಾಂ ಬೆಂಗ್ರೆ ಮೊದಲಾದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು