11:44 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಮಂಗಳೂರು: ಭಾರತ್‌ ಬಂದ್ ಬೆಂಬಲಿಸಿ  ಬಂದರು ಶ್ರಮಿಕರ‌‌ ಸಂಘದಿಂದ ಪ್ರತಿಭಟನೆ

27/09/2021, 17:16

ಮಂಗಳೂರು(reporterkarnataka.com): ದೇಶವ್ಯಾಪಿ ಭಾರತ ಬಂದ್ ಬೆಂಬಲಿಸಿ ಮಂಗಳೂರಿನ ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ಸೋಮವಾರ ಕಾರ್ಮಿಕರು ಕೆಲ‌ ಸಮಯ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು.


ಪ್ರತಿಭಟನೆ ಉದ್ದೇಶಿಸಿ‌ ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕ ಫೆಡರೇಶನ್ ರಾಜ್ಯ ಅಧ್ತಕ್ಷ ಹಾಗೂ‌ ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ.ಮಹಾಂತೇಶ ಮಾತನಾಡಿ, ಕಳೆದ‌ 10 ತಿಂಗಳಿಂದ‌ ಮೂರು ಕೃಷಿ‌ ಕಾನೂನುಗಳ ವಿರುದ್ದ ರೈತರು ದೆಹಲಿ ಸುತ್ತಮುತ್ತ ಹೋರಾಟ ನಿರತರಾಗಿದ್ದಾರೆ. ‌ಆದರೆ ನರೇಂದ್ರ‌ ಮೋದಿ‌ ನೇತೃತ್ವದ ಬಿಜೆಪಿ ಸರ್ಕಾರ ರೈತರ ಜತರ ಮಾತುಕತೆ ನಡೆಸದೆ ಹೋರಾಟವನ್ನು ಹತ್ತಿಕ್ಕಲು ಹಲವು ಯತ್ನಗಳನ್ನು ನಡೆಸಿರುವುದು ಖಂಡನಾರ್ಹ. ಈ ನೂತನ ಕೃಷಿ‌ ಕಾನೂನುಗಳು ಕೃಷಿ‌ ಕ್ಷೇತ್ರದ ಕಂಪನೀಕರಣಕ್ಕೆ ಅವಕಾಶ ನೀಡಲಿವೆ ಇದರಿಂದ ಫಲವತ್ತಾದ ಕೃಷಿ‌ಭೂಮಿ ಕಾರ್ಪೊರೇಟ್ ಕೈ ವಶವಾಗಲಿದೆ. ಇದರಿಂದ ಭವಿಷ್ಯದಲ್ಲಿ ದೇಶದಲ್ಲಿ ಆಹಾರ ಸಮಸ್ಯೆ ಎದುರಿಸಲಿದೆ. ಕೋಟ್ಯಂತರ ಜನರು ಬೆಲೆ ಏರಿಕೆ ಹಾಗೂ ಹಸಿವಿನಿಂದ 

ತತ್ತರಿಸಲಿದ್ದಾರೆ. ಹೀಗಾಗಿ ದೇಶದ‌ಭವಿಷ್ಯದ ದೃಷ್ಟಿಯಿಂದ ರೈತರ ಈ‌ ಹೋರಾಟವನ್ನು ಕಾರ್ಮಿಕರು ಬೆಂಬಲಿಸಬೇಕು ಎಂದು ಕರೆ ನೀಡಿದರು.

ಮತ್ತೊಂದು ಕಡೆ ದೇಶದಲ್ಲಿ ಜಾರಿಯಲ್ಲಿದ್ದ 29 ಕಾರ್ಮಿಕ‌ ಕಾನೂನುಗಳನ್ನು ನಾಲ್ಕು ಸಂಹಿತೆಗಳನ್ನಾಗಿ ರೂಪಿಸಿದೆ. ಇದರಿಂದ ಸ್ವಾತಂತ್ರ್ಯ ಪೂರ್ವದಿಂದಲೂ ಜಾರಿಯಲ್ಲಿದ್ದ ಹಲವು ಹಕ್ಕುಗಳು ಮತ್ತು ಸಾಮಾಜಿಕ ಸುರಕ್ಷತೆಗಳಿಂದ ಕಾರ್ಮಿಕರು ವಂಚಿತರಾಗಲಿದ್ದಾರೆ. ಈ ಹಿನ್ನಲೆಯಲ್ಲಿ ರೈತ ಕಾರ್ಮಿಕರ‌ ಈ‌ ಐಕ್ಯ ಚಳವಳಿ ‌ಮೂಲಕ ಈ ನೀತಿಗಳನ್ನು ಹಿಮ್ಮೆಟ್ಟಿಸಲು ಅವರು ಕರೆ ನೀಡಿದರು.

ಬಂದರು ಶ್ರಮಿಕರ‌ ಸಂಘದ ಅಧ್ಯಕ್ಷ

ವಿಲ್ಲಿ ವಿಲ್ಸನ್, ಕಾರ್ಯದರ್ಶಿ ಇಮ್ತೀಯಾಜ್, ಆದಿವಾಸಿ ಹಾಗೂ ದಲಿತ ಹಕ್ಕುಗಳ‌ ಸಮಿತಿಯ ಯೋಗಿಶ್ ಜಪ್ಪಿನ ಮೊಗರು, ಹರೀಶ ಕೆರೆಬೈಲ್, ಹಂಜಾ ತಂದೊಲಗಿ, ಸಿದ್ದಿಕ್ ಫಾರುಕ್ ಉಳ್ಳಾಲ, ಮಜೀದ್ ಉಳ್ಳಾಲ, ಮಾಧವ ಕಾವೂರು, ಮೊಯಿದಿನ್ ಕಲ್ಕಟ್ಟ,ಯಲ್ಲಪ್ಪ, ಡಿವೈಎಫ್ಐ ಮುಖಂಡರಾದ ಎ.ಬಿ ನೌಶಾದ್, ಹನೀಫ್ ಬೆಂಗ್ರೆ, ಅಸ್ಲಾಂ ಬೆಂಗ್ರೆ ಮೊದಲಾದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು