8:58 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಮಂಗಳೂರು: ಭಾರತ್‌ ಬಂದ್ ಬೆಂಬಲಿಸಿ  ಬಂದರು ಶ್ರಮಿಕರ‌‌ ಸಂಘದಿಂದ ಪ್ರತಿಭಟನೆ

27/09/2021, 17:16

ಮಂಗಳೂರು(reporterkarnataka.com): ದೇಶವ್ಯಾಪಿ ಭಾರತ ಬಂದ್ ಬೆಂಬಲಿಸಿ ಮಂಗಳೂರಿನ ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ಸೋಮವಾರ ಕಾರ್ಮಿಕರು ಕೆಲ‌ ಸಮಯ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು.


ಪ್ರತಿಭಟನೆ ಉದ್ದೇಶಿಸಿ‌ ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕ ಫೆಡರೇಶನ್ ರಾಜ್ಯ ಅಧ್ತಕ್ಷ ಹಾಗೂ‌ ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ.ಮಹಾಂತೇಶ ಮಾತನಾಡಿ, ಕಳೆದ‌ 10 ತಿಂಗಳಿಂದ‌ ಮೂರು ಕೃಷಿ‌ ಕಾನೂನುಗಳ ವಿರುದ್ದ ರೈತರು ದೆಹಲಿ ಸುತ್ತಮುತ್ತ ಹೋರಾಟ ನಿರತರಾಗಿದ್ದಾರೆ. ‌ಆದರೆ ನರೇಂದ್ರ‌ ಮೋದಿ‌ ನೇತೃತ್ವದ ಬಿಜೆಪಿ ಸರ್ಕಾರ ರೈತರ ಜತರ ಮಾತುಕತೆ ನಡೆಸದೆ ಹೋರಾಟವನ್ನು ಹತ್ತಿಕ್ಕಲು ಹಲವು ಯತ್ನಗಳನ್ನು ನಡೆಸಿರುವುದು ಖಂಡನಾರ್ಹ. ಈ ನೂತನ ಕೃಷಿ‌ ಕಾನೂನುಗಳು ಕೃಷಿ‌ ಕ್ಷೇತ್ರದ ಕಂಪನೀಕರಣಕ್ಕೆ ಅವಕಾಶ ನೀಡಲಿವೆ ಇದರಿಂದ ಫಲವತ್ತಾದ ಕೃಷಿ‌ಭೂಮಿ ಕಾರ್ಪೊರೇಟ್ ಕೈ ವಶವಾಗಲಿದೆ. ಇದರಿಂದ ಭವಿಷ್ಯದಲ್ಲಿ ದೇಶದಲ್ಲಿ ಆಹಾರ ಸಮಸ್ಯೆ ಎದುರಿಸಲಿದೆ. ಕೋಟ್ಯಂತರ ಜನರು ಬೆಲೆ ಏರಿಕೆ ಹಾಗೂ ಹಸಿವಿನಿಂದ 

ತತ್ತರಿಸಲಿದ್ದಾರೆ. ಹೀಗಾಗಿ ದೇಶದ‌ಭವಿಷ್ಯದ ದೃಷ್ಟಿಯಿಂದ ರೈತರ ಈ‌ ಹೋರಾಟವನ್ನು ಕಾರ್ಮಿಕರು ಬೆಂಬಲಿಸಬೇಕು ಎಂದು ಕರೆ ನೀಡಿದರು.

ಮತ್ತೊಂದು ಕಡೆ ದೇಶದಲ್ಲಿ ಜಾರಿಯಲ್ಲಿದ್ದ 29 ಕಾರ್ಮಿಕ‌ ಕಾನೂನುಗಳನ್ನು ನಾಲ್ಕು ಸಂಹಿತೆಗಳನ್ನಾಗಿ ರೂಪಿಸಿದೆ. ಇದರಿಂದ ಸ್ವಾತಂತ್ರ್ಯ ಪೂರ್ವದಿಂದಲೂ ಜಾರಿಯಲ್ಲಿದ್ದ ಹಲವು ಹಕ್ಕುಗಳು ಮತ್ತು ಸಾಮಾಜಿಕ ಸುರಕ್ಷತೆಗಳಿಂದ ಕಾರ್ಮಿಕರು ವಂಚಿತರಾಗಲಿದ್ದಾರೆ. ಈ ಹಿನ್ನಲೆಯಲ್ಲಿ ರೈತ ಕಾರ್ಮಿಕರ‌ ಈ‌ ಐಕ್ಯ ಚಳವಳಿ ‌ಮೂಲಕ ಈ ನೀತಿಗಳನ್ನು ಹಿಮ್ಮೆಟ್ಟಿಸಲು ಅವರು ಕರೆ ನೀಡಿದರು.

ಬಂದರು ಶ್ರಮಿಕರ‌ ಸಂಘದ ಅಧ್ಯಕ್ಷ

ವಿಲ್ಲಿ ವಿಲ್ಸನ್, ಕಾರ್ಯದರ್ಶಿ ಇಮ್ತೀಯಾಜ್, ಆದಿವಾಸಿ ಹಾಗೂ ದಲಿತ ಹಕ್ಕುಗಳ‌ ಸಮಿತಿಯ ಯೋಗಿಶ್ ಜಪ್ಪಿನ ಮೊಗರು, ಹರೀಶ ಕೆರೆಬೈಲ್, ಹಂಜಾ ತಂದೊಲಗಿ, ಸಿದ್ದಿಕ್ ಫಾರುಕ್ ಉಳ್ಳಾಲ, ಮಜೀದ್ ಉಳ್ಳಾಲ, ಮಾಧವ ಕಾವೂರು, ಮೊಯಿದಿನ್ ಕಲ್ಕಟ್ಟ,ಯಲ್ಲಪ್ಪ, ಡಿವೈಎಫ್ಐ ಮುಖಂಡರಾದ ಎ.ಬಿ ನೌಶಾದ್, ಹನೀಫ್ ಬೆಂಗ್ರೆ, ಅಸ್ಲಾಂ ಬೆಂಗ್ರೆ ಮೊದಲಾದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು