9:33 PM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಮಂಗಳೂರು: ಭಾರತ್‌ ಬಂದ್ ಬೆಂಬಲಿಸಿ  ಬಂದರು ಶ್ರಮಿಕರ‌‌ ಸಂಘದಿಂದ ಪ್ರತಿಭಟನೆ

27/09/2021, 17:16

ಮಂಗಳೂರು(reporterkarnataka.com): ದೇಶವ್ಯಾಪಿ ಭಾರತ ಬಂದ್ ಬೆಂಬಲಿಸಿ ಮಂಗಳೂರಿನ ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ಸೋಮವಾರ ಕಾರ್ಮಿಕರು ಕೆಲ‌ ಸಮಯ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು.


ಪ್ರತಿಭಟನೆ ಉದ್ದೇಶಿಸಿ‌ ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕ ಫೆಡರೇಶನ್ ರಾಜ್ಯ ಅಧ್ತಕ್ಷ ಹಾಗೂ‌ ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ.ಮಹಾಂತೇಶ ಮಾತನಾಡಿ, ಕಳೆದ‌ 10 ತಿಂಗಳಿಂದ‌ ಮೂರು ಕೃಷಿ‌ ಕಾನೂನುಗಳ ವಿರುದ್ದ ರೈತರು ದೆಹಲಿ ಸುತ್ತಮುತ್ತ ಹೋರಾಟ ನಿರತರಾಗಿದ್ದಾರೆ. ‌ಆದರೆ ನರೇಂದ್ರ‌ ಮೋದಿ‌ ನೇತೃತ್ವದ ಬಿಜೆಪಿ ಸರ್ಕಾರ ರೈತರ ಜತರ ಮಾತುಕತೆ ನಡೆಸದೆ ಹೋರಾಟವನ್ನು ಹತ್ತಿಕ್ಕಲು ಹಲವು ಯತ್ನಗಳನ್ನು ನಡೆಸಿರುವುದು ಖಂಡನಾರ್ಹ. ಈ ನೂತನ ಕೃಷಿ‌ ಕಾನೂನುಗಳು ಕೃಷಿ‌ ಕ್ಷೇತ್ರದ ಕಂಪನೀಕರಣಕ್ಕೆ ಅವಕಾಶ ನೀಡಲಿವೆ ಇದರಿಂದ ಫಲವತ್ತಾದ ಕೃಷಿ‌ಭೂಮಿ ಕಾರ್ಪೊರೇಟ್ ಕೈ ವಶವಾಗಲಿದೆ. ಇದರಿಂದ ಭವಿಷ್ಯದಲ್ಲಿ ದೇಶದಲ್ಲಿ ಆಹಾರ ಸಮಸ್ಯೆ ಎದುರಿಸಲಿದೆ. ಕೋಟ್ಯಂತರ ಜನರು ಬೆಲೆ ಏರಿಕೆ ಹಾಗೂ ಹಸಿವಿನಿಂದ 

ತತ್ತರಿಸಲಿದ್ದಾರೆ. ಹೀಗಾಗಿ ದೇಶದ‌ಭವಿಷ್ಯದ ದೃಷ್ಟಿಯಿಂದ ರೈತರ ಈ‌ ಹೋರಾಟವನ್ನು ಕಾರ್ಮಿಕರು ಬೆಂಬಲಿಸಬೇಕು ಎಂದು ಕರೆ ನೀಡಿದರು.

ಮತ್ತೊಂದು ಕಡೆ ದೇಶದಲ್ಲಿ ಜಾರಿಯಲ್ಲಿದ್ದ 29 ಕಾರ್ಮಿಕ‌ ಕಾನೂನುಗಳನ್ನು ನಾಲ್ಕು ಸಂಹಿತೆಗಳನ್ನಾಗಿ ರೂಪಿಸಿದೆ. ಇದರಿಂದ ಸ್ವಾತಂತ್ರ್ಯ ಪೂರ್ವದಿಂದಲೂ ಜಾರಿಯಲ್ಲಿದ್ದ ಹಲವು ಹಕ್ಕುಗಳು ಮತ್ತು ಸಾಮಾಜಿಕ ಸುರಕ್ಷತೆಗಳಿಂದ ಕಾರ್ಮಿಕರು ವಂಚಿತರಾಗಲಿದ್ದಾರೆ. ಈ ಹಿನ್ನಲೆಯಲ್ಲಿ ರೈತ ಕಾರ್ಮಿಕರ‌ ಈ‌ ಐಕ್ಯ ಚಳವಳಿ ‌ಮೂಲಕ ಈ ನೀತಿಗಳನ್ನು ಹಿಮ್ಮೆಟ್ಟಿಸಲು ಅವರು ಕರೆ ನೀಡಿದರು.

ಬಂದರು ಶ್ರಮಿಕರ‌ ಸಂಘದ ಅಧ್ಯಕ್ಷ

ವಿಲ್ಲಿ ವಿಲ್ಸನ್, ಕಾರ್ಯದರ್ಶಿ ಇಮ್ತೀಯಾಜ್, ಆದಿವಾಸಿ ಹಾಗೂ ದಲಿತ ಹಕ್ಕುಗಳ‌ ಸಮಿತಿಯ ಯೋಗಿಶ್ ಜಪ್ಪಿನ ಮೊಗರು, ಹರೀಶ ಕೆರೆಬೈಲ್, ಹಂಜಾ ತಂದೊಲಗಿ, ಸಿದ್ದಿಕ್ ಫಾರುಕ್ ಉಳ್ಳಾಲ, ಮಜೀದ್ ಉಳ್ಳಾಲ, ಮಾಧವ ಕಾವೂರು, ಮೊಯಿದಿನ್ ಕಲ್ಕಟ್ಟ,ಯಲ್ಲಪ್ಪ, ಡಿವೈಎಫ್ಐ ಮುಖಂಡರಾದ ಎ.ಬಿ ನೌಶಾದ್, ಹನೀಫ್ ಬೆಂಗ್ರೆ, ಅಸ್ಲಾಂ ಬೆಂಗ್ರೆ ಮೊದಲಾದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು