2:39 AM Saturday19 - July 2025
ಬ್ರೇಕಿಂಗ್ ನ್ಯೂಸ್
ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ…

ಇತ್ತೀಚಿನ ಸುದ್ದಿ

ಮಂಗಳೂರು: ಬಿಜೆಪಿ ಹೈವೋಲ್ಟೆಜ್ ಸಭೆ; ಅಮಿತ್ ಶಾ ಗೆಲ್ಲಲ್ಲೇ ಬೇಕೆಂದು ಖಡಕ್ ಸೂಚನೆ ಕೊಟ್ಟ 2 ಕ್ಷೇತ್ರಗಳು ಯಾವುದು?

12/02/2023, 10:37

ಮಂಗಳೂರು(reporterkarnataka.com):: ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಕರಾವಳಿ ಜಿಲ್ಲೆಯ ಮಂಗಳೂರು ಕ್ಷೇತ್ರ ಹಾಗೂ ಮಲೆನಾಡು ಜಿಲ್ಲೆಯ ಶೃಂಗೇರಿ ಕ್ಷೇತ್ರವನ್ನು ಗೆಲ್ಲಲ್ಲೇ ಬೇಕೆಂದು ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಪಾಳಯದಲ್ಲಿ ಚಾಣುಕ್ಯ ಎಂದು ಕರೆಸಿಕೊಂಡಿರುವ ಅಮಿತ್ ಶಾ ಕಟ್ಟಪ್ಪಣೆ ಕೊಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಅಮಿತ್ ಶಾ ಅವರು ಮಂಗಳೂರಿನಲ್ಲಿ ಕರಾವಳಿ ಹಾಗೂ ಮಲೆನಾಡಿನ 6 ಜಿಲ್ಲೆಗಳ ಪ್ರತಿನಿಧಿಗಳ ಹೈವೋಲ್ಟೆಜ್ ಸಭೆ ನಡೆಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಶಾ, ಈ ಬಾರಿ ಮಂಗಳೂರು ಮತ್ತು ಶೃಂಗೇರಿ ಕ್ಷೇತ್ರ ಯಾವುದೇ ಕಾರಣಕ್ಕೂ ಕೈತಪ್ಪಬಾರದು ಎಂದು ಪಕ್ಷದ ಮುಖಂಡರಿಗೆ ಖಡಕ್ ಸೂಚನೆ ನೀಡಿದ್ದಾರೆ. ಇದರ ಜತೆಗೆ ಪಕ್ಷದ ಮುಖಂಡರಿಗೆ ಕೆಲ ಟಾಸ್ಕ್ ಹಾಗೂ ಟಾರ್ಗೆಟ್ ನೀಡಿದ್ದಾರೆ ಎನ್ನಲಾಗಿದೆ.
ಮಂಗಳೂರು ಶಾಸಕ ಯು.ಟಿ. ಖಾದರ್ ಹಾಗೂ ಶೃಂಗೇರಿ ಕ್ಷೇತ್ರದ ಶಾಸಕ ರಾಜೇಗೌಡ ಅವರ ಮೇಲೆ ಶಾ ಕಣ್ಣು ನೆಟ್ಟಿದ್ದು, ಅವರಿಂದ ಈ ಬಾರಿ ಕ್ಷೇತ್ರಗಳನ್ನು ಕಸಿಯಲೇಬೇಕು ಎಂದು ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು