9:42 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಮಂಗಳೂರು: ಬಿಜೆಪಿ ಹೈವೋಲ್ಟೆಜ್ ಸಭೆ; ಅಮಿತ್ ಶಾ ಗೆಲ್ಲಲ್ಲೇ ಬೇಕೆಂದು ಖಡಕ್ ಸೂಚನೆ ಕೊಟ್ಟ 2 ಕ್ಷೇತ್ರಗಳು ಯಾವುದು?

12/02/2023, 10:37

ಮಂಗಳೂರು(reporterkarnataka.com):: ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಕರಾವಳಿ ಜಿಲ್ಲೆಯ ಮಂಗಳೂರು ಕ್ಷೇತ್ರ ಹಾಗೂ ಮಲೆನಾಡು ಜಿಲ್ಲೆಯ ಶೃಂಗೇರಿ ಕ್ಷೇತ್ರವನ್ನು ಗೆಲ್ಲಲ್ಲೇ ಬೇಕೆಂದು ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಪಾಳಯದಲ್ಲಿ ಚಾಣುಕ್ಯ ಎಂದು ಕರೆಸಿಕೊಂಡಿರುವ ಅಮಿತ್ ಶಾ ಕಟ್ಟಪ್ಪಣೆ ಕೊಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಅಮಿತ್ ಶಾ ಅವರು ಮಂಗಳೂರಿನಲ್ಲಿ ಕರಾವಳಿ ಹಾಗೂ ಮಲೆನಾಡಿನ 6 ಜಿಲ್ಲೆಗಳ ಪ್ರತಿನಿಧಿಗಳ ಹೈವೋಲ್ಟೆಜ್ ಸಭೆ ನಡೆಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಶಾ, ಈ ಬಾರಿ ಮಂಗಳೂರು ಮತ್ತು ಶೃಂಗೇರಿ ಕ್ಷೇತ್ರ ಯಾವುದೇ ಕಾರಣಕ್ಕೂ ಕೈತಪ್ಪಬಾರದು ಎಂದು ಪಕ್ಷದ ಮುಖಂಡರಿಗೆ ಖಡಕ್ ಸೂಚನೆ ನೀಡಿದ್ದಾರೆ. ಇದರ ಜತೆಗೆ ಪಕ್ಷದ ಮುಖಂಡರಿಗೆ ಕೆಲ ಟಾಸ್ಕ್ ಹಾಗೂ ಟಾರ್ಗೆಟ್ ನೀಡಿದ್ದಾರೆ ಎನ್ನಲಾಗಿದೆ.
ಮಂಗಳೂರು ಶಾಸಕ ಯು.ಟಿ. ಖಾದರ್ ಹಾಗೂ ಶೃಂಗೇರಿ ಕ್ಷೇತ್ರದ ಶಾಸಕ ರಾಜೇಗೌಡ ಅವರ ಮೇಲೆ ಶಾ ಕಣ್ಣು ನೆಟ್ಟಿದ್ದು, ಅವರಿಂದ ಈ ಬಾರಿ ಕ್ಷೇತ್ರಗಳನ್ನು ಕಸಿಯಲೇಬೇಕು ಎಂದು ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು