5:22 PM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಮಂಗಳೂರು: ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಅಮಾನತಿಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

12/03/2024, 23:38

ಮಂಗಳೂರು(reporterkarnataka.com): ಸಂವಿಧಾನ ಬದಲಾವಣೆ ಹೇಳಿಕೆ ನೀಡಿದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಅಮಾನತಿಗೆ ಆಗ್ರಹಿಸಿ ಮಂಗಳವಾರ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಯಿತು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ, ಬಿಜೆಪಿಗೆ ಈ ದೇಶದ ಸಂವಿಧಾನದ ಮೇಲೆ ನಂಬಿಕೆ ಇಲ್ಲ. ಸಂವಿಧಾನದ ಮೇಲಿನ ನಂಬಿಕೆ ಕಳೆದುಕೊಂಡವರು ದೇಶದಲ್ಲಿ ಆಡಳಿತ ನಡೆಸಲು ಅಸಾಧ್ಯ ಎಂದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಸತ್ ಸದಸ್ಯರಿಗೆ ನೈತಿಕತೆ ಇದ್ದಲ್ಲಿ ಅನಂತ್ ಕುಮಾರ್ ಅವರನ್ನು ಪಕ್ಷದ ಸಂಸತ್ ಸ್ಥಾನದಿಂದ ಉಚ್ಛಾಟಿಸಲಿ ಎಂದು ಆಗ್ರಹಿಸಿದರು.
ಸಂವಿಧಾನದ ಪ್ರತಿ ಸುಟ್ಟವರಿಗೂ ಬಿಜೆಪಿ ರಕ್ಷಣೆ ನೀಡಿದೆ. ಅಭಿವೃದ್ಧಿ ಕುರಿತು ಮನಸ್ಸಿಲ್ಲ. ಮಹಿಳೆಯರು, ರೈತರು, ಯುವಕರ ಮೇಲೆ ಕಳಕಳಿ ಇಲ್ಲ. ದೇಶ ವಿರೋಧಿಗಳನ್ನೇ ಬಿಜೆಪಿ ಬೆಂಬಲಿಸುತ್ತಿದೆ.
ಸಂಸದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ ಅವರನ್ನು ಕಾರ್ಯಕರ್ತರು ತಿರಸ್ಕರಿಸಿದ್ದಾರೆ. ನಂ. ೧,೨ ಸಾಧಕರಿಗೆ ಗೋಬ್ಯಾಕ್ ಎನ್ನುವುದಾದರೆ ಉಳಿದವರ ಪಾಡೇನು ಎಂದು ಅವರು ಹೇಳಿದರು.
ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಬಿಜೆಪಿಯಿಂದ ಸಂವಿಧಾನ ಬದಲಾವಣೆಯನ್ನಷ್ಟೇ ನಿರೀಕ್ಷಿಸಲು ಸಾಧ್ಯ. ಇಂದು ದೇಶ ಉಳಿದಿದೆ ಎಂದರೆ ಅದು ಸಂವಿಧಾನದಿಂದ. ಇದರಿಂದಾಗಿ ಇಂದು ದೇಶದಲ್ಲಿ ಸ್ವತಂತ್ರವಾಗಿ ಬದುಕುತ್ತಿದ್ದೇವೆ. ಸಂವಿಧಾನವನ್ನು ನಂಬಿಕೊಂಡು ದೇಶದ ಜನ ಬದುಕುತ್ತಿದ್ದೇವೆ. ಪ್ರಧಾನಿಯನ್ನು ಟೀಕಿಸಿದ್ದಲ್ಲಿ ಅವರನ್ನು ದೇಶ ವಿರೋಧಿ ಎನ್ನುತ್ತಾರೆ. ಅದರೆ ಸರಕಾರ ಅನಂತ್ ಕುಮಾರ್ ವಿಚಾರದಲ್ಲಿ ಮೌನವಾಗಿದೆ. ಸುಳ್ಳೆ ಹೇಳಿ ಜನರ ದಾರಿ ತಪ್ಪಿಸುವುದೇ ಬಿಜೆಪಿಯ ಬಂಡವಾಳ ಎಂದರು.


ಕಾರ್ಪೊರೇಟರ್ ಎ.ಸಿ. ವಿನಯ್ ರಾಜ್, ಎನ್ ಐಯು ಅಧ್ಯಕ್ಷ ಸುಹಾನ್ ಆಳ್ವ, ಕಿಸಾನ್ ಘಟಕ ಅಧ್ಯಕ್ಷ ರಿತೇಶ್ ಅಂಚನ್ ಪ್ರಮುಖರಾದ ಪ್ರಕಾಶ್ ಸಾಲ್ಯಾನ್, ಚೇತನ್ ಕುಮಾರ್, ರಘುರಾಮ್ ಕದ್ರಿ, ಸ್ಟ್ಯಾನ್ಲಿ, ಲಕ್ಷ್ಮಣ್ ಶೆಟ್ಟಿ, ಅನ್ಸರುದ್ದೀನ್ ಸಾಲ್ಮರ್, ಶಾಂತಳಾ ಗಟ್ಟಿ, ಚಂದ್ರಕಲಾ ಜೋಗಿ, ನಮಿತಾ ಡಿ. ರಾವ್, ಅಪ್ಪಿ, ಮಂಜುಳಾ ನಾಯಕ್, ಸಲೀಂ ಅಹಮ್ಮದ್, ಲವಿನಾ, ವಸಂತಿ ಅಂಚನ್, ಗೀತಾ ಅತ್ತಾವರ್, ನೆಲ್ಸನ್ ಮೊಂತೇರೊ, ಗಿರೀಶ್ ಶೆಟ್ಟಿ, ಸುಧಾಕರ್.ಜೆ.ಜಪ್ಪಿನಮೊಗರು, ಹಾರ್ಬರ್ಟ್ ಡಿಸೋಜ, ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು,ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು