8:11 PM Saturday21 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಮಂಗಳೂರು: ಬಿಎಸ್ಸೆನ್ನೆಲ್ ಹೆಸರಿನಲ್ಲಿ ಕೆವೈಸಿ ಕೇಳುವ ನೆಪ; ಆನ್ ಲೈನ್ ಖದೀಮರು ನಿಮ್ಮನ್ನು ವಂಚಿಸಿಯಾರು ಜೋಕೆ

13/03/2022, 22:52

ಮಂಗಳೂರು (reporterkarnataka.com): ತಾನು ಬಿಎಸ್ಸೆನ್ನೆಲ್ ಕಂಪನಿಯಿಂದ ಕರೆ ಮಾಡುತ್ತಿದ್ದೇನೆ ಅಂತ ಹೇಳಿ ಕೆವೈಸಿ ಸಂಬಂಧಿಸಿದ ದಾಖಲೆ ಕೇಳಿ ನಾಗರಿಕರೊಬ್ಬರನ್ನು ವಂಚಿಸಲು ಯತ್ನಿಸಿದ ಬಗ್ಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಚಂದಾದಾರರು ಕೆವೈಸಿಗೆ ಅಗತ್ಯ ದಾಖಲೆಗಳನ್ನು ನೀಡದಿದ್ದರೆ, ಸಿಮ್ ಕಾರ್ಡ್ ಅನ್ನು ನಿರ್ಬಂಧಿಸಲಾಗುವುದು ಎಂದು ಕರೆ ಮಾಡಿದಾತ
ಬೆದರಿಸಿದ್ದಾನೆ. ಆತ ಕನ್ನಡದಲ್ಲೇ ಮಾತನಾಡಿದ್ದಾನೆ. ಆದರೆಎಚ್ಚೆತ್ತ ನಾಗರಿಕ ಆತನನ್ನು ಹೆಚ್ಚು ಪ್ರಶ್ನಿಸಲು ಆರಂಭಿಸಿದಾಗ ವಂಚಕ ಅವರನ್ನು ನಿಂದಿಸಿ ಕರೆ ಕಟ್ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ಆನ್‌ಲೈನ್ ವಂಚಕರು ಕೆವೈಸಿ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಒಟಿಪಿ ಮತ್ತು ಇತರ ದಾಖಲೆಗಳಂತಹ ವಿವರಗಳನ್ನು ನಾಗರಿಕರಿಗೆ ಕೇಳುವ ಈ ರೀತಿಯ ಅನೇಕ ನಿದರ್ಶನಗಳು ಹಿಂದೆಯೂ ಬೆಳಕಿಗೆ ಬಂದಿವೆ.

ಆದರೆ, ಅವರು ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಮಾತನಾಡುತ್ತಿದ್ದರು. ಆದರೆ ಈಗ ಕೆಲವರು ಕನ್ನಡದಲ್ಲೇ ಮಾತನಾಡುತ್ತಿದ್ದಾರೆ. ವಂಚಕರು ಕನ್ನಡ ಭಾಷೆಯಲ್ಲೇ ಮಾತನಾಡುವ ನೆಪದಲ್ಲಿ ಸಾರ್ವಜನಿಕರನ್ನು ನಂಬಿಸಿ ವಂಚನೆ ಮಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು