1:18 PM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಮಂಗಳೂರು: ಬಿಎಸ್ಸೆನ್ನೆಲ್ ಹೆಸರಿನಲ್ಲಿ ಕೆವೈಸಿ ಕೇಳುವ ನೆಪ; ಆನ್ ಲೈನ್ ಖದೀಮರು ನಿಮ್ಮನ್ನು ವಂಚಿಸಿಯಾರು ಜೋಕೆ

13/03/2022, 22:52

ಮಂಗಳೂರು (reporterkarnataka.com): ತಾನು ಬಿಎಸ್ಸೆನ್ನೆಲ್ ಕಂಪನಿಯಿಂದ ಕರೆ ಮಾಡುತ್ತಿದ್ದೇನೆ ಅಂತ ಹೇಳಿ ಕೆವೈಸಿ ಸಂಬಂಧಿಸಿದ ದಾಖಲೆ ಕೇಳಿ ನಾಗರಿಕರೊಬ್ಬರನ್ನು ವಂಚಿಸಲು ಯತ್ನಿಸಿದ ಬಗ್ಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಚಂದಾದಾರರು ಕೆವೈಸಿಗೆ ಅಗತ್ಯ ದಾಖಲೆಗಳನ್ನು ನೀಡದಿದ್ದರೆ, ಸಿಮ್ ಕಾರ್ಡ್ ಅನ್ನು ನಿರ್ಬಂಧಿಸಲಾಗುವುದು ಎಂದು ಕರೆ ಮಾಡಿದಾತ
ಬೆದರಿಸಿದ್ದಾನೆ. ಆತ ಕನ್ನಡದಲ್ಲೇ ಮಾತನಾಡಿದ್ದಾನೆ. ಆದರೆಎಚ್ಚೆತ್ತ ನಾಗರಿಕ ಆತನನ್ನು ಹೆಚ್ಚು ಪ್ರಶ್ನಿಸಲು ಆರಂಭಿಸಿದಾಗ ವಂಚಕ ಅವರನ್ನು ನಿಂದಿಸಿ ಕರೆ ಕಟ್ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ಆನ್‌ಲೈನ್ ವಂಚಕರು ಕೆವೈಸಿ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಒಟಿಪಿ ಮತ್ತು ಇತರ ದಾಖಲೆಗಳಂತಹ ವಿವರಗಳನ್ನು ನಾಗರಿಕರಿಗೆ ಕೇಳುವ ಈ ರೀತಿಯ ಅನೇಕ ನಿದರ್ಶನಗಳು ಹಿಂದೆಯೂ ಬೆಳಕಿಗೆ ಬಂದಿವೆ.

ಆದರೆ, ಅವರು ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಮಾತನಾಡುತ್ತಿದ್ದರು. ಆದರೆ ಈಗ ಕೆಲವರು ಕನ್ನಡದಲ್ಲೇ ಮಾತನಾಡುತ್ತಿದ್ದಾರೆ. ವಂಚಕರು ಕನ್ನಡ ಭಾಷೆಯಲ್ಲೇ ಮಾತನಾಡುವ ನೆಪದಲ್ಲಿ ಸಾರ್ವಜನಿಕರನ್ನು ನಂಬಿಸಿ ವಂಚನೆ ಮಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು