4:44 PM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಮಂಗಳೂರು: ಬಿಎಸ್ಸೆನ್ನೆಲ್ ಹೆಸರಿನಲ್ಲಿ ಕೆವೈಸಿ ಕೇಳುವ ನೆಪ; ಆನ್ ಲೈನ್ ಖದೀಮರು ನಿಮ್ಮನ್ನು ವಂಚಿಸಿಯಾರು ಜೋಕೆ

13/03/2022, 22:52

ಮಂಗಳೂರು (reporterkarnataka.com): ತಾನು ಬಿಎಸ್ಸೆನ್ನೆಲ್ ಕಂಪನಿಯಿಂದ ಕರೆ ಮಾಡುತ್ತಿದ್ದೇನೆ ಅಂತ ಹೇಳಿ ಕೆವೈಸಿ ಸಂಬಂಧಿಸಿದ ದಾಖಲೆ ಕೇಳಿ ನಾಗರಿಕರೊಬ್ಬರನ್ನು ವಂಚಿಸಲು ಯತ್ನಿಸಿದ ಬಗ್ಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಚಂದಾದಾರರು ಕೆವೈಸಿಗೆ ಅಗತ್ಯ ದಾಖಲೆಗಳನ್ನು ನೀಡದಿದ್ದರೆ, ಸಿಮ್ ಕಾರ್ಡ್ ಅನ್ನು ನಿರ್ಬಂಧಿಸಲಾಗುವುದು ಎಂದು ಕರೆ ಮಾಡಿದಾತ
ಬೆದರಿಸಿದ್ದಾನೆ. ಆತ ಕನ್ನಡದಲ್ಲೇ ಮಾತನಾಡಿದ್ದಾನೆ. ಆದರೆಎಚ್ಚೆತ್ತ ನಾಗರಿಕ ಆತನನ್ನು ಹೆಚ್ಚು ಪ್ರಶ್ನಿಸಲು ಆರಂಭಿಸಿದಾಗ ವಂಚಕ ಅವರನ್ನು ನಿಂದಿಸಿ ಕರೆ ಕಟ್ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ಆನ್‌ಲೈನ್ ವಂಚಕರು ಕೆವೈಸಿ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಒಟಿಪಿ ಮತ್ತು ಇತರ ದಾಖಲೆಗಳಂತಹ ವಿವರಗಳನ್ನು ನಾಗರಿಕರಿಗೆ ಕೇಳುವ ಈ ರೀತಿಯ ಅನೇಕ ನಿದರ್ಶನಗಳು ಹಿಂದೆಯೂ ಬೆಳಕಿಗೆ ಬಂದಿವೆ.

ಆದರೆ, ಅವರು ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಮಾತನಾಡುತ್ತಿದ್ದರು. ಆದರೆ ಈಗ ಕೆಲವರು ಕನ್ನಡದಲ್ಲೇ ಮಾತನಾಡುತ್ತಿದ್ದಾರೆ. ವಂಚಕರು ಕನ್ನಡ ಭಾಷೆಯಲ್ಲೇ ಮಾತನಾಡುವ ನೆಪದಲ್ಲಿ ಸಾರ್ವಜನಿಕರನ್ನು ನಂಬಿಸಿ ವಂಚನೆ ಮಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು