6:24 AM Saturday16 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಮಂಗಳೂರು: ಬಿಎಸ್ಸೆನ್ನೆಲ್ ಹೆಸರಿನಲ್ಲಿ ಕೆವೈಸಿ ಕೇಳುವ ನೆಪ; ಆನ್ ಲೈನ್ ಖದೀಮರು ನಿಮ್ಮನ್ನು ವಂಚಿಸಿಯಾರು ಜೋಕೆ

13/03/2022, 22:52

ಮಂಗಳೂರು (reporterkarnataka.com): ತಾನು ಬಿಎಸ್ಸೆನ್ನೆಲ್ ಕಂಪನಿಯಿಂದ ಕರೆ ಮಾಡುತ್ತಿದ್ದೇನೆ ಅಂತ ಹೇಳಿ ಕೆವೈಸಿ ಸಂಬಂಧಿಸಿದ ದಾಖಲೆ ಕೇಳಿ ನಾಗರಿಕರೊಬ್ಬರನ್ನು ವಂಚಿಸಲು ಯತ್ನಿಸಿದ ಬಗ್ಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಚಂದಾದಾರರು ಕೆವೈಸಿಗೆ ಅಗತ್ಯ ದಾಖಲೆಗಳನ್ನು ನೀಡದಿದ್ದರೆ, ಸಿಮ್ ಕಾರ್ಡ್ ಅನ್ನು ನಿರ್ಬಂಧಿಸಲಾಗುವುದು ಎಂದು ಕರೆ ಮಾಡಿದಾತ
ಬೆದರಿಸಿದ್ದಾನೆ. ಆತ ಕನ್ನಡದಲ್ಲೇ ಮಾತನಾಡಿದ್ದಾನೆ. ಆದರೆಎಚ್ಚೆತ್ತ ನಾಗರಿಕ ಆತನನ್ನು ಹೆಚ್ಚು ಪ್ರಶ್ನಿಸಲು ಆರಂಭಿಸಿದಾಗ ವಂಚಕ ಅವರನ್ನು ನಿಂದಿಸಿ ಕರೆ ಕಟ್ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ಆನ್‌ಲೈನ್ ವಂಚಕರು ಕೆವೈಸಿ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಒಟಿಪಿ ಮತ್ತು ಇತರ ದಾಖಲೆಗಳಂತಹ ವಿವರಗಳನ್ನು ನಾಗರಿಕರಿಗೆ ಕೇಳುವ ಈ ರೀತಿಯ ಅನೇಕ ನಿದರ್ಶನಗಳು ಹಿಂದೆಯೂ ಬೆಳಕಿಗೆ ಬಂದಿವೆ.

ಆದರೆ, ಅವರು ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಮಾತನಾಡುತ್ತಿದ್ದರು. ಆದರೆ ಈಗ ಕೆಲವರು ಕನ್ನಡದಲ್ಲೇ ಮಾತನಾಡುತ್ತಿದ್ದಾರೆ. ವಂಚಕರು ಕನ್ನಡ ಭಾಷೆಯಲ್ಲೇ ಮಾತನಾಡುವ ನೆಪದಲ್ಲಿ ಸಾರ್ವಜನಿಕರನ್ನು ನಂಬಿಸಿ ವಂಚನೆ ಮಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು