2:22 PM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

Mangaluru | ಕೆನರಾ ಬ್ಯಾಂಕಿನಿಂದ ಪ್ರತಿಭಾವಂತ ಎಸ್ ಸಿ/ ಎಸ್ ಟಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ವಿತರಣೆ

16/08/2025, 18:30

ಮಂಗಳೂರು(reporterkarnataka.com): ಕೆನರಾ ಬ್ಯಾಂಕ್ ಡಾ. ಅಂಬೇಡ್ಕರ್ ವಿದ್ಯಾ ಜ್ಯೋತಿ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಎಸ್ ಸಿ/ ಎಸ್ ಟಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಮಂಗಳೂರಿನ ಕೇಂದ್ರ ವೃತ್ತ ಕಚೇರಿಯಲ್ಲಿ ನಡೆಯಿತು.
ಶಿಕ್ಷಣಕ್ಕಾಗಿ ಒಟ್ಟು 45,786 ವಿದ್ಯಾರ್ಥಿನಿಯರಿಗೆ ಮತ್ತು 2600 ಅಧಿಕ ಶಾಲೆಗಳಿಗೆ ಸುಮಾರು 1824.68 ಲಕ್ಷ ವಿದ್ಯಾರ್ಥಿ ವೇತನವನ್ನು ಭಾರತಾದ್ಯಂತ ನೀಡುವ ಮೂಲಕ ಬೆಂಬಲಿಸಲಾಯಿತು. ದೇಶದ ಯುವ ಮನಸುಗಳನ್ನು ಸಬಲೀಕರಣಗೊಳಿಸುವ ಮತ್ತು ಹಿಂದುಳಿದ ಪ್ರತಿಭಾವಂತ ಎಸ್ ಸಿ ಎಸ್ ಟಿ ಬಾಲಕಿಯರಿಗೆ ವಿದ್ಯಾರ್ಥಿವೇತನವನ್ನು ನೀಡುವುದರ ಮೂಲಕ ಶೈಕ್ಷಣಿಕ ಶ್ರೇಷ್ಠತೆಯನ್ನು ಸಾಧಿಸುವಲ್ಲಿ ಸಹಾಯ ಮಾಡುವ ಗುರಿಯನ್ನು ಕೆನರಾ ಬ್ಯಾಂಕ್, ಭಾರತಾದ್ಯಂತ 26 ವೃತ್ತ ಕಚೇರಿಗಳಲ್ಲಿ 177 ಪ್ರಾದೇಶಿಕ ಕಚೇರಿಗಳಲ್ಲಿ ಮತ್ತು 7660ಕ್ಕೂ ಹೆಚ್ಚು ಶಾಖೆಗಳಲ್ಲಿ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ನಡೆಯಿತು.
ವಿದ್ಯಾರ್ಥಿ ವೇತನದ ಯೋಜನೆಯ ಹೊರತಾಗಿ ಕೆನರಾ ಬ್ಯಾಂಕ್ ಸಿ ಎಸ್ ಆರ್ ಕಾರ್ಯಕ್ರಮದಲ್ಲಿ ಗ್ರಾಮೀಣ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಶೌಚಾಲಯ ನಿರ್ಮಾಣ, ನೈರ್ಮಲ್ಯ ಸೌಲಭ್ಯಗಳನ್ನು ಒದಗಿಸಿದೆ ಎಂದು ಅಧ್ಯಕ್ಷತೆಯನ್ನು ವಹಿಸಿದ ಬ್ಯಾಂಕಿನ ಜನರಲ್ ಮ್ಯಾನೇಜರ್ ಮಂಜುನಾಥ್ ಬಿ. ಸಿಂಗೈ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ಬಿ.ಎಸ್. ಹೇಮಲತಾ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು ಎಜಿಎಂ ಸಂಜಯ್ ಕುಮಾರ್ ತ್ರಿವೇದಿ, ಡೆಪ್ಯುಟಿ ಜನರಲ್ ಮ್ಯಾನೇಜರ್ ಲತಾ ಕುರುಪ್ , ಮತ್ತು ಶೈಲೇಂದ್ರನಾಥ್ ಶೀತ್, ವ್ಯವಸ್ಥಾಪಕರಾದ ತುಶಾಂತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಹಿರಿಯ ವ್ಯವಸ್ಥಾಪಕಿ ಸ್ವಾತಿ ಕೆ. ಸ್ವಾಗತಿಸಿದರು. ಸಂಜಯ್ ಕುಮಾರ್ ತ್ರಿವೇದಿ ಧನ್ಯವಾದ ಸಮರ್ಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು