5:48 PM Sunday21 - June 2026
ಬ್ರೇಕಿಂಗ್ ನ್ಯೂಸ್
Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ

ಇತ್ತೀಚಿನ ಸುದ್ದಿ

Mangaluru | ಕೆನರಾ ಬ್ಯಾಂಕಿನಿಂದ ಪ್ರತಿಭಾವಂತ ಎಸ್ ಸಿ/ ಎಸ್ ಟಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ವಿತರಣೆ

16/08/2025, 18:30

ಮಂಗಳೂರು(reporterkarnataka.com): ಕೆನರಾ ಬ್ಯಾಂಕ್ ಡಾ. ಅಂಬೇಡ್ಕರ್ ವಿದ್ಯಾ ಜ್ಯೋತಿ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಎಸ್ ಸಿ/ ಎಸ್ ಟಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಮಂಗಳೂರಿನ ಕೇಂದ್ರ ವೃತ್ತ ಕಚೇರಿಯಲ್ಲಿ ನಡೆಯಿತು.
ಶಿಕ್ಷಣಕ್ಕಾಗಿ ಒಟ್ಟು 45,786 ವಿದ್ಯಾರ್ಥಿನಿಯರಿಗೆ ಮತ್ತು 2600 ಅಧಿಕ ಶಾಲೆಗಳಿಗೆ ಸುಮಾರು 1824.68 ಲಕ್ಷ ವಿದ್ಯಾರ್ಥಿ ವೇತನವನ್ನು ಭಾರತಾದ್ಯಂತ ನೀಡುವ ಮೂಲಕ ಬೆಂಬಲಿಸಲಾಯಿತು. ದೇಶದ ಯುವ ಮನಸುಗಳನ್ನು ಸಬಲೀಕರಣಗೊಳಿಸುವ ಮತ್ತು ಹಿಂದುಳಿದ ಪ್ರತಿಭಾವಂತ ಎಸ್ ಸಿ ಎಸ್ ಟಿ ಬಾಲಕಿಯರಿಗೆ ವಿದ್ಯಾರ್ಥಿವೇತನವನ್ನು ನೀಡುವುದರ ಮೂಲಕ ಶೈಕ್ಷಣಿಕ ಶ್ರೇಷ್ಠತೆಯನ್ನು ಸಾಧಿಸುವಲ್ಲಿ ಸಹಾಯ ಮಾಡುವ ಗುರಿಯನ್ನು ಕೆನರಾ ಬ್ಯಾಂಕ್, ಭಾರತಾದ್ಯಂತ 26 ವೃತ್ತ ಕಚೇರಿಗಳಲ್ಲಿ 177 ಪ್ರಾದೇಶಿಕ ಕಚೇರಿಗಳಲ್ಲಿ ಮತ್ತು 7660ಕ್ಕೂ ಹೆಚ್ಚು ಶಾಖೆಗಳಲ್ಲಿ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ನಡೆಯಿತು.
ವಿದ್ಯಾರ್ಥಿ ವೇತನದ ಯೋಜನೆಯ ಹೊರತಾಗಿ ಕೆನರಾ ಬ್ಯಾಂಕ್ ಸಿ ಎಸ್ ಆರ್ ಕಾರ್ಯಕ್ರಮದಲ್ಲಿ ಗ್ರಾಮೀಣ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಶೌಚಾಲಯ ನಿರ್ಮಾಣ, ನೈರ್ಮಲ್ಯ ಸೌಲಭ್ಯಗಳನ್ನು ಒದಗಿಸಿದೆ ಎಂದು ಅಧ್ಯಕ್ಷತೆಯನ್ನು ವಹಿಸಿದ ಬ್ಯಾಂಕಿನ ಜನರಲ್ ಮ್ಯಾನೇಜರ್ ಮಂಜುನಾಥ್ ಬಿ. ಸಿಂಗೈ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ಬಿ.ಎಸ್. ಹೇಮಲತಾ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು ಎಜಿಎಂ ಸಂಜಯ್ ಕುಮಾರ್ ತ್ರಿವೇದಿ, ಡೆಪ್ಯುಟಿ ಜನರಲ್ ಮ್ಯಾನೇಜರ್ ಲತಾ ಕುರುಪ್ , ಮತ್ತು ಶೈಲೇಂದ್ರನಾಥ್ ಶೀತ್, ವ್ಯವಸ್ಥಾಪಕರಾದ ತುಶಾಂತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಹಿರಿಯ ವ್ಯವಸ್ಥಾಪಕಿ ಸ್ವಾತಿ ಕೆ. ಸ್ವಾಗತಿಸಿದರು. ಸಂಜಯ್ ಕುಮಾರ್ ತ್ರಿವೇದಿ ಧನ್ಯವಾದ ಸಮರ್ಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು