9:04 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಮಂಗಳೂರು: ಕೆನರಾ ಹೈಸ್ಕೂಲ್ ಅಸೋಸಿಯೇಶನ್ ವತಿಯಿಂದ  ಜೂನ್ 26ರಂದು ‘ಗುರುನಮನ’

23/06/2022, 20:38

ಮಂಗಳೂರು(reporterkarnataka.com): ಶತಮಾನ ಪರಂಪರೆ ಹೊಂದಿರುವ ಕೆನರಾ ಹೈಸ್ಕೂಲ್ ಅಸೋಸಿಯೇಶನ್ ವತಿಯಿಂದ ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟವಾದ ಮತ್ತು ಘನತೆಯ ಗುರುನಮನ ಕಾರ್ಯಕ್ರಮ ನಗರದ ಕೊಡಿಯಾಲಬೈಲ್ ಟಿ.ವಿ.ರಮಣ ಪೈ ಸಭಾಭವನದಲ್ಲಿ ಜೂನ್ 26ರಂದು ಬೆಳಗ್ಗೆ 9.30ರಿಂದ ನಡೆಯಲಿದೆ.

ಕೆನರಾ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕ ಶಿಕ್ಷಕೇತರರಿಗೆ ಕೃತಜ್ಞತೆ ಸಲ್ಲಿಸುವ ಕಾರ್ಯಕ್ರಮ ಇದಾಗಿದೆ. ಕೆನರಾ ಶಿಕ್ಷಣ ಸಂಸ್ಥೆಗಳ ವಿವಿಧ ಸಂಘಗಳ ಸಹಯೋಗದಿಂದ ನಡೆಯುವ ಈ ಗುರುನಮನ ಕಾರ್ಯಕ್ರಮದಲ್ಲಿ ಸುಮಾರು 100ಕ್ಕೂ ಅಧಿಕ ಮಂದಿ ನಿವೃತ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಕೆನರಾ ಶಿಕ್ಷಣ ಸಂಸ್ಥೆಯ ಗೌರವ ಕಾರ್ಯದರ್ಶಿ ರಂಗನಾಥ ಭಟ್ ಹಾಗೂ.ಹಿರಿಯ ಪತ್ರಕರ್ತರು ಮತ್ತು ಕೆನರಾ ಹಳೆ ವಿದ್ಯಾರ್ಥಿ ಮನೋಹರ ಪ್ರಸಾದ್ ತಿಳಿಸಿದರು.

ಸಂಸ್ಥೆಗಳಲ್ಲಿ ಈಗ ಲಭ್ಯವಿರುವ ದಾಖಲೆ ಪತ್ರಗಳನ್ನು ಆಧರಿಸಿ ಅವರಿಗೆ ಆಹ್ವಾನ ಪತ್ರ ಕಳುಹಿಸಲಾಗಿದೆ. ಅವರಲ್ಲಿ ಅತ್ಯಂತ ಹಿರಿಯರಾಗಿರುವವರು 84ರ ಹರೆಯದ ನಿವೃತ್ತ ಶಿಕ್ಷಕಿ ಮಾಲತಿ ಅವರು. ಈ ಎಲ್ಲ ನಿವೃತ್ತ ಶಿಕ್ಷಕರು-ಶಿಕ್ಷಕೇತರರು ತಮ್ಮ ಸೇವಾ ಬದ್ಧತೆಯಿಂದ ಕೆನರಾ ಶಿಕ್ಷಣ ಸಂಸ್ಥೆಗಳ ಉನ್ನತಿಗೆ ಕಾರಣರಾಗಿದ್ದಾರೆ ಎಂದು ಅವರು ನುಡಿದರು.

ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಈಗ ಕೆ.ಜಿ. ಯಿಂದ ಎಂಜಿನಿಯರಿಂಗ್ ವರೆಗೆ 11 ಶಿಕ್ಷಣ ಸಂಸ್ಥೆಗಳನ್ನು ಹೊಂದಿದೆ . 8592 ಮಂದಿ ವಿದ್ಯಾರ್ಥಿಗಳಿದ್ದಾರೆ. ಗುರುನಮನ ಕಾರ್ಯಕ್ರಮಕ್ಕೆ ವ್ಯಾಪಕ ಸಿದ್ಧತೆಗಳನ್ನು ಸ್ವಯಂಸೇವಕರು ನಡೆಸಿದ್ದಾರೆ. ಈ ಕಾರ್ಯಕ್ರಮವು ಶಿಕ್ಷಣ ಕ್ಷೇತ್ರದಲ್ಲಿ ವಿನೂತನ ಮುನ್ನುಡಿಯಾಗುವುದು ಎಂಬ ನಿರೀಕ್ಷೆ ಇದೆ. ಕೆನರಾ ಶಿಕ್ಷಣ ಸಂಸ್ಥೆಯಲ್ಲಿ ಕಲಿತಂತಹ ಹಳೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿನಂತಿಸುತ್ತೇವೆ ಎಂದರು.

ಕೆನರಾ ಶಿಕ್ಷಣ ಸಂಸ್ಥೆಯಲ್ಲಿ ಪಿಆರ್ ಒ ಉಜ್ವಲ್,  ಕೆನರಾ ಹಳೆ ವಿದ್ಯಾರ್ಥಿಗಳಾಗಿರುವ ಸುಧೀರ ಭಕ್ತ ಮತ್ತು ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು