1:02 PM Sunday16 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಮಂಗಳೂರು: ಕೆನರಾ ಹೈಸ್ಕೂಲ್ ಅಸೋಸಿಯೇಶನ್ ವತಿಯಿಂದ  ಜೂನ್ 26ರಂದು ‘ಗುರುನಮನ’

23/06/2022, 20:38

ಮಂಗಳೂರು(reporterkarnataka.com): ಶತಮಾನ ಪರಂಪರೆ ಹೊಂದಿರುವ ಕೆನರಾ ಹೈಸ್ಕೂಲ್ ಅಸೋಸಿಯೇಶನ್ ವತಿಯಿಂದ ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟವಾದ ಮತ್ತು ಘನತೆಯ ಗುರುನಮನ ಕಾರ್ಯಕ್ರಮ ನಗರದ ಕೊಡಿಯಾಲಬೈಲ್ ಟಿ.ವಿ.ರಮಣ ಪೈ ಸಭಾಭವನದಲ್ಲಿ ಜೂನ್ 26ರಂದು ಬೆಳಗ್ಗೆ 9.30ರಿಂದ ನಡೆಯಲಿದೆ.

ಕೆನರಾ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕ ಶಿಕ್ಷಕೇತರರಿಗೆ ಕೃತಜ್ಞತೆ ಸಲ್ಲಿಸುವ ಕಾರ್ಯಕ್ರಮ ಇದಾಗಿದೆ. ಕೆನರಾ ಶಿಕ್ಷಣ ಸಂಸ್ಥೆಗಳ ವಿವಿಧ ಸಂಘಗಳ ಸಹಯೋಗದಿಂದ ನಡೆಯುವ ಈ ಗುರುನಮನ ಕಾರ್ಯಕ್ರಮದಲ್ಲಿ ಸುಮಾರು 100ಕ್ಕೂ ಅಧಿಕ ಮಂದಿ ನಿವೃತ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಕೆನರಾ ಶಿಕ್ಷಣ ಸಂಸ್ಥೆಯ ಗೌರವ ಕಾರ್ಯದರ್ಶಿ ರಂಗನಾಥ ಭಟ್ ಹಾಗೂ.ಹಿರಿಯ ಪತ್ರಕರ್ತರು ಮತ್ತು ಕೆನರಾ ಹಳೆ ವಿದ್ಯಾರ್ಥಿ ಮನೋಹರ ಪ್ರಸಾದ್ ತಿಳಿಸಿದರು.

ಸಂಸ್ಥೆಗಳಲ್ಲಿ ಈಗ ಲಭ್ಯವಿರುವ ದಾಖಲೆ ಪತ್ರಗಳನ್ನು ಆಧರಿಸಿ ಅವರಿಗೆ ಆಹ್ವಾನ ಪತ್ರ ಕಳುಹಿಸಲಾಗಿದೆ. ಅವರಲ್ಲಿ ಅತ್ಯಂತ ಹಿರಿಯರಾಗಿರುವವರು 84ರ ಹರೆಯದ ನಿವೃತ್ತ ಶಿಕ್ಷಕಿ ಮಾಲತಿ ಅವರು. ಈ ಎಲ್ಲ ನಿವೃತ್ತ ಶಿಕ್ಷಕರು-ಶಿಕ್ಷಕೇತರರು ತಮ್ಮ ಸೇವಾ ಬದ್ಧತೆಯಿಂದ ಕೆನರಾ ಶಿಕ್ಷಣ ಸಂಸ್ಥೆಗಳ ಉನ್ನತಿಗೆ ಕಾರಣರಾಗಿದ್ದಾರೆ ಎಂದು ಅವರು ನುಡಿದರು.

ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಈಗ ಕೆ.ಜಿ. ಯಿಂದ ಎಂಜಿನಿಯರಿಂಗ್ ವರೆಗೆ 11 ಶಿಕ್ಷಣ ಸಂಸ್ಥೆಗಳನ್ನು ಹೊಂದಿದೆ . 8592 ಮಂದಿ ವಿದ್ಯಾರ್ಥಿಗಳಿದ್ದಾರೆ. ಗುರುನಮನ ಕಾರ್ಯಕ್ರಮಕ್ಕೆ ವ್ಯಾಪಕ ಸಿದ್ಧತೆಗಳನ್ನು ಸ್ವಯಂಸೇವಕರು ನಡೆಸಿದ್ದಾರೆ. ಈ ಕಾರ್ಯಕ್ರಮವು ಶಿಕ್ಷಣ ಕ್ಷೇತ್ರದಲ್ಲಿ ವಿನೂತನ ಮುನ್ನುಡಿಯಾಗುವುದು ಎಂಬ ನಿರೀಕ್ಷೆ ಇದೆ. ಕೆನರಾ ಶಿಕ್ಷಣ ಸಂಸ್ಥೆಯಲ್ಲಿ ಕಲಿತಂತಹ ಹಳೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿನಂತಿಸುತ್ತೇವೆ ಎಂದರು.

ಕೆನರಾ ಶಿಕ್ಷಣ ಸಂಸ್ಥೆಯಲ್ಲಿ ಪಿಆರ್ ಒ ಉಜ್ವಲ್,  ಕೆನರಾ ಹಳೆ ವಿದ್ಯಾರ್ಥಿಗಳಾಗಿರುವ ಸುಧೀರ ಭಕ್ತ ಮತ್ತು ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು