11:16 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಮಂಗಳೂರು ಕೆನರಾ ಕಾಲೇಜಿನಲ್ಲಿ ವಾಣಿಜ್ಯ ಹಾಗೂ ನಿರ್ವಹಣಾ ಸಂಘದಿಂದ ರಾಟ್ ಫೆಸ್ಟ್

11/11/2022, 20:49

ಮಂಗಳೂರು(reporterkarnataka.com): ನಗರದ ಕೆನರಾ ಕಾಲೇಜಿನಲ್ಲಿ ವಾಣಿಜ್ಯ ಹಾಗೂ ನಿರ್ವಹಣಾ ಸಂಘದ ವತಿಯಿಂದ ROT (ರಾಟ್) ಫೆಸ್ಟ್ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕೆನರಾ ಸಮೂಹ ಸಂಸ್ಥೆಯ ನಿರ್ದೇಶಕರಾದ ಡಾ. ರಾಧಾಕೃಷ್ಣ ಎಸ್. ಐತಾಳ್ ನೆರವೇರಿಸಿ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ನಾಯಕತ್ವವನ್ನು ಬೆಳೆಸಬಹುದು ಹಾಗೂ ಇಂತಹ ಪಠ್ಯೇತರ ಚಟುವಟಿಕೆಗಳಲ್ಲಿ ಬಾಗವಹಿಸುವುದರಿಂದ ನಮ್ಮಲ್ಲಿ ಸಕಾರಾತ್ಮಕ ಚಿಂತನೆ ಬೆಳೆಯಲು ಸಹಕಾರವಾಗುತ್ತದೆ ಎಂದರು.
ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕಾಲೇಜಿನ ಹೆಸರನ್ನು ಸಮಾಜಕ್ಕೆ ಎತ್ತಿ ತೋರಿಸಬೇಕು ಎಂದರು.

ಅಧ್ಯಕ್ಷೀಯ ಭಾಷಣವನ್ನು ಪ್ರಾಂಶುಪಾಲೆ ಡಾ. ಪ್ರೇಮಲತಾ. ವಿ. ನೆರವೇರಿಸಿ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮುಂದಕ್ಕೆ ಅಂತರ್ ಕಾಲೇಜು ಮಟ್ಟದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಹಕಾರಿಯಾಗುತ್ತದೆ ಎಂದರು.


ವಾಣಿಜ್ಯ ಹಾಗೂ ನಿರ್ವಹಣಾ ವಿಭಾಗದ ಮುಖ್ಯಸ್ಥೆ ದೇಜಮ್ಮ ಮಾತನಾಡಿ ವಿದ್ಯಾರ್ಥಿಗಳಲ್ಲಿ ಹೊಸ ಚಿಂತನೆ, ಅನ್ವೇಷಣೆ ಬಂದಲ್ಲಿ ಮಾತ್ರ ಅದೊಂದು ಪ್ರಯೋಜನಕಾರಿ ಫಲ ನೀಡಲು ಸಾಧ್ಯ ಎಂದರು.
ಕಾರ್ಯಕ್ರಮದ ಸಂಯೋಜಕರಾದ ಉಷಾ ನಾಯಕ್ ಹಾಗೂ ಆಶಾಲತಾ ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ ನರಸಿಂಹ ಭಟ್ ಸ್ವಾಗತಿಸಿದರು. ಸಹ ಕಾರ್ಯದರ್ಶಿ ತೃಪ್ತಿ ವ್ಯಾಸ್ ರಾಟ್ ಬಗ್ಗೆ ತಿಳಿಸಿದರು. ಸಂಜನಾ ಕಾರ್ಯಕ್ರಮ ನಿರೂಪಿಸಿದರು. ಸ್ಪಂದನಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು