12:33 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮಂಗಳೂರು ಕೆನರಾ ಕಾಲೇಜಿನಲ್ಲಿ ವಾಣಿಜ್ಯ ಹಾಗೂ ನಿರ್ವಹಣಾ ಸಂಘದಿಂದ ರಾಟ್ ಫೆಸ್ಟ್

11/11/2022, 20:49

ಮಂಗಳೂರು(reporterkarnataka.com): ನಗರದ ಕೆನರಾ ಕಾಲೇಜಿನಲ್ಲಿ ವಾಣಿಜ್ಯ ಹಾಗೂ ನಿರ್ವಹಣಾ ಸಂಘದ ವತಿಯಿಂದ ROT (ರಾಟ್) ಫೆಸ್ಟ್ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕೆನರಾ ಸಮೂಹ ಸಂಸ್ಥೆಯ ನಿರ್ದೇಶಕರಾದ ಡಾ. ರಾಧಾಕೃಷ್ಣ ಎಸ್. ಐತಾಳ್ ನೆರವೇರಿಸಿ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ನಾಯಕತ್ವವನ್ನು ಬೆಳೆಸಬಹುದು ಹಾಗೂ ಇಂತಹ ಪಠ್ಯೇತರ ಚಟುವಟಿಕೆಗಳಲ್ಲಿ ಬಾಗವಹಿಸುವುದರಿಂದ ನಮ್ಮಲ್ಲಿ ಸಕಾರಾತ್ಮಕ ಚಿಂತನೆ ಬೆಳೆಯಲು ಸಹಕಾರವಾಗುತ್ತದೆ ಎಂದರು.
ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕಾಲೇಜಿನ ಹೆಸರನ್ನು ಸಮಾಜಕ್ಕೆ ಎತ್ತಿ ತೋರಿಸಬೇಕು ಎಂದರು.

ಅಧ್ಯಕ್ಷೀಯ ಭಾಷಣವನ್ನು ಪ್ರಾಂಶುಪಾಲೆ ಡಾ. ಪ್ರೇಮಲತಾ. ವಿ. ನೆರವೇರಿಸಿ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮುಂದಕ್ಕೆ ಅಂತರ್ ಕಾಲೇಜು ಮಟ್ಟದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಹಕಾರಿಯಾಗುತ್ತದೆ ಎಂದರು.


ವಾಣಿಜ್ಯ ಹಾಗೂ ನಿರ್ವಹಣಾ ವಿಭಾಗದ ಮುಖ್ಯಸ್ಥೆ ದೇಜಮ್ಮ ಮಾತನಾಡಿ ವಿದ್ಯಾರ್ಥಿಗಳಲ್ಲಿ ಹೊಸ ಚಿಂತನೆ, ಅನ್ವೇಷಣೆ ಬಂದಲ್ಲಿ ಮಾತ್ರ ಅದೊಂದು ಪ್ರಯೋಜನಕಾರಿ ಫಲ ನೀಡಲು ಸಾಧ್ಯ ಎಂದರು.
ಕಾರ್ಯಕ್ರಮದ ಸಂಯೋಜಕರಾದ ಉಷಾ ನಾಯಕ್ ಹಾಗೂ ಆಶಾಲತಾ ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ ನರಸಿಂಹ ಭಟ್ ಸ್ವಾಗತಿಸಿದರು. ಸಹ ಕಾರ್ಯದರ್ಶಿ ತೃಪ್ತಿ ವ್ಯಾಸ್ ರಾಟ್ ಬಗ್ಗೆ ತಿಳಿಸಿದರು. ಸಂಜನಾ ಕಾರ್ಯಕ್ರಮ ನಿರೂಪಿಸಿದರು. ಸ್ಪಂದನಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು