11:20 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಮಂಗಳೂರು ಕೆನರಾ ಕಾಲೇಜಿನಲ್ಲಿ ರಕ್ತ ಕಾಂಡಕೋಶ ದಾನ ಜಾಗೃತಿ ಮತ್ತು ನೋಂದಣಿ ಆಂದೋಲನ

15/11/2022, 22:54

ಮಂಗಳೂರು(reporterkarnataka.com): “ರಕ್ತ ಕ್ಯಾನ್ಸರ್ ಗೆ ಹೊಸ ತಂತ್ರಜ್ಞಾನದ ಸಹಾಯದಿಂದ ರಕ್ತ ಕಾಂಡ ಕೋಶ ಕಸಿ ಚಿಕಿತ್ಸೆಯ ಮೂಲಕ ಕ್ಯಾನ್ಸರ್ ಕಾಂಡಕೋಶವನ್ನು ನಾಶ ಮಾಡಿ ರೋಗಿಯನ್ನು ಗುಣಪಡಿಸಬಹುದು ಎಂದು
ಡಿಕೆಎಂಎಸ್,ಬಿಎಂಎಸ್ಟಿ ಫೌಂಡೇಶನ್ ನ ದಾನಿ ನೇಮಕಾತಿ ವಿಭಾಗದ ಉಪ ವ್ಯವಸ್ಥಾಪಕ ಪ್ರಜಿತ್ ಸುಧಾಕರ್ ಹೇಳಿದರು.

ಅವರು ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು ಕದ್ರಿ ಲಯನ್ಸ್ ಮತ್ತು ಲಿಯೋ ಕ್ಲಬ್,ಡಿಕೆಎಂಎಸ್,ಬಿಎಂಎಸ್ಟಿ ಫೌಂಡೇಶನ್ ಇಂಡಿಯಾ ದ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ರಕ್ತಕಾಂಡಕೋಶ ದಾನ ಜಾಗೃತಿ ಮತ್ತು ನೋಂದಣಿ ಆಂದೋಲನದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ರಕ್ತದಾನದಂತೆ ಇದೂ ರಕ್ತಕಾಂಡಕೋಶ ದಾನವೂ ಪುಣ್ಯಕಾರ್ಯವಾಗಿದ್ದು, ಇದರಿಂದ ರೋಗಿಗಳ ಜೀವವುಳಿಸಲು ಸಾಧ್ಯ. ಭಾರತದಲ್ಲಿ ರಕ್ತ ಕ್ಯಾನ್ಸರ್ ನಿಂದ ಬಳಲುತ್ತಿರುವ ರೋಗಿಗಳಿಗೆ ರಕ್ತ ಕಾಂಡ ಕೋಶಗಳ ಕಸಿ ಅಗತ್ಯತೆ ಹೆಚ್ಚಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಈ ದಾನಕ್ಕೆ ಮುಂದೆ ಬರಬೇಕು.ಪಾಶ್ಚಾತ್ಯ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ರಕ್ತ ಕಾಂಡಕೋಶ ದಾನಿಗಳ ಸಂಖ್ಯೆ ಇರುವುದರಿಂದ ರೋಗಿಗಳಿಗೆ ಹೊಂದಿಕೆಯಾಗಬಲ್ಲ ದಾನಿಗಳನ್ನು ಪಡೆಯುವ ಅವಕಾಶ ಶೇ.10ರಿಂದ ಶೇ.15 ಮಾತ್ರ ಇದೆ.ಈ ನಿಟ್ಟಿನಲ್ಲಿ ಯುವಜನಾಂಗ ಈ ದಾನ ಪ್ರಕ್ರಿಯೆಯಲ್ಲಿ ತಮ್ಮನ್ನು ಹೆಚ್ಚುಹೆಚ್ಚು ತೊಡಗಿಸಿಕೊಳ್ಳಬೇಕು ಎಂದು
ಹೇಳಿದರು.

ಕೆನರಾ ವಿಕಾಸ ಸಂಸ್ಥೆಯ ಸಂಯೋಜಕ ಬಸ್ತಿ ಪುರುಷೋತ್ತಮ ಶೆಣೈಯವರು ಅಧ್ಯಕ್ಷತೆಯನ್ನು ವಹಿಸಿದ್ದರು .ಚೈಲ್ಡ್ ಹುಡ್ ಕ್ಯಾನ್ಸರ್ ನ ಜಿಲ್ಲಾ ಸಂಯೋಜಕ ಲಯನ್ ಸಬಿತಾ ಶೆಟ್ಟಿ, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.


ಅಂಗಾಂಗ ದಾನ ಕಾರ್ಯಕ್ರಮದ ಜಿಲ್ಲಾ ಸಂಯೋಜಕ ಫಿಲಿಪ್ ಪಿರೇರಾ,ಡಿಕೆಎಂಎಸ್ ಬಿಎಂಎಸ್ ಟಿ ಫೌಂಡೇಶನ್ ಮಹಾಮಿತ್ರ ಎಸ್ ಅರ್, ಆಶಿತಾ ಶೆಟ್ಟಿ, ಕದ್ರಿ ಲಯನ್ಸ್ ಕ್ಲಬ್ ಅಧ್ಯಕ್ಷೆ ಲಯನ್ ಸುಮಿತ್ರಾ ಶೆಟ್ಟಿ,ವಿವಿಧ ಲಯನ್ಸ್ ಕ್ಲಬ್ ಗಳ ಅಧ್ಯಕ್ಷರುಗಳಾದ ಲಯನ್ ಆಶಾ ಚಂದ್ರಮೋಹನ್,ಲಯನ್ ಆಶಾ ಶೆಟ್ಟಿ, ಲಯನ್ ಆಶಾ ನಾಗರಾಜ್,ಲಯನ್ ಮೀರಾ ಶೆಟ್ಟಿ, ಲಯನ್ ವಿಜಯ ಶೆಟ್ಟಿ, ಕೆನರಾ ಕಾಲೇಜಿನ ರಾ.ಸೇ.ಯೋ.ಅಧಿಕಾರಿಗಳಾದ ಸೀಮಾ ಪ್ರಭು,ವಾಣಿ ಯು.ಎಸ್, ಉಪ ಯೋಜನಾಧಿಕಾರಿಗಳಾದ ವಿಜೇತಾ ಭಟ್,ಸುಶಾಮ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲೆ ಡಾ.ಪ್ರೇಮಲತಾ ವಿ.ಸ್ವಾಗತಿಸಿ, ವಿಜೇತಾ ಭಟ್ ವಂದಿಸಿದರು.ರಾ.ಸೇ.ಯೋ.ಸ್ವಯಂಸೇವಕಿ ಶ್ರೀಮಾ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು