3:01 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಮಂಗಳೂರು ಕೆನರಾ ಕಾಲೇಜು ವಾಣಿಜ್ಯ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಿಂದ ಮಕ್ಕಳ ದಿನಾಚರಣೆ

16/11/2022, 20:53

ಮಂಗಳೂರು(reporterlarnataka.com): ನಗರದ ಕೆನರಾ ಕಾಲೇಜಿನ 50ನೇ ವರ್ಷದ ಸುವರ್ಣ ಸಂಭ್ರಮದ ಪ್ರಯುಕ್ತ, ವಾಣಿಜ್ಯ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಿಂದ ಮಕ್ಕಳ ದಿನಾಚರಣೆಯ ಪ್ರಯುಕ್ತ ಬೊಕ್ಕಪಟ್ನದ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಅಗತ್ಯ ಕಲಿಕಾ ಸಾಮಗ್ರಿ ವಿತರಣಾ ಕಾರ್ಯಕ್ರಮವು ನಡೆಯಿತು.

ಪ್ರತಿಭಾನ್ವಿತ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ, ಪೆನ್ಸಿಲ್, ರಬ್ಬರ್ ಮುಂತಾದ ದೈನಂದಿನ ವಿದ್ಯಾಭ್ಯಾಸಕ್ಕೆ ಬೇಕಾದ ಅಗತ್ಯ ವಸ್ತುಗಳನ್ನು ಉಚಿತವಾಗಿ ವಿತರಣೆ ಮಾಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಇಂದಿನ ಮಕ್ಕಳೇ ಮುಂದಿನ ಭವ್ಯ ಭಾರತದ ಪ್ರಜೆಗಳು ಎಂಬಂತೆ ಪ್ರತಿ ಮಗುವು ದೇಶದ ಸರ್ವಶ್ರೇಷ್ಠ ಆಸ್ತಿ. ಕೆನರಾ ಕಾಲೇಜಿನ ಎಂ.ಕಾಂ ವಿಭಾಗದ ವಿದ್ಯಾರ್ಥಿಗಳು ಶಾಲಾ ಮಕ್ಕಳಿಗಾಗಿ ವಿವಿಧ ಮನರಂಜನಾ ಕ್ರೀಡೆಗಳನ್ನು ನಡೆಸಿ, ಬಹುಮಾನವನ್ನು ವಿತರಿಸಿ, ಸಿಹಿ ತಿಂಡಿಯನ್ನು ಹಂಚಲಾಯಿತು.

ಬೊಕ್ಕಪಟ್ನ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಡ್ರೆಸಿಲ್ಲ್ ಲಿಲ್ಲೀ ಮೆಂಜೀಝ್ ರವರು, ಶಿಕ್ಷಕರು, ಸರ್ವ ವಿದ್ಯಾರ್ಥಿಗಳು ಕಾಲೇಜಿನ ನಿಸ್ವಾರ್ಥ ಸೇವೆಗಾಗಿ ಅಭಿನಂದನೆ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಕೆನರಾ ವಾಣಿಜ್ಯ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು, ಸಂಚಾಲಕಿ ಶ್ರೀಮತಿ ಸ್ವಾತಿ ನಾಯಕ್, ಉಪನ್ಯಾಸಕರಾದ ಡಾ. ಪ್ರಶಾಂತ್ ಭಟ್, ಮೇಘ ರಾವ್, ಹರೀಶ್ ಪೈ ಉಪಸ್ಥಿತರಿದ್ದರು.
ವಿಶಾಲ್ ಕಾರ್ಯಕ್ರಮವನ್ನು ಸ್ವಾಗತಿಸಿ ನಿರೂಪಿಸಿದರು. ಶರಣ್ಯ ಪ್ರಸ್ತಾವನೆಗೈದರು. ಸ್ವಾತಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು