4:12 AM Tuesday4 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ಮಂಗ್ಳುರ್ ಕಥೊಲಿಕ್ ಸಭಾ ಕೇಂದ್ರೀಯ ಮಾಜಿ ಅಧ್ಯಕ್ಷ ಕಾಶ್ಮೀರ್ ಮಿನೇಜಸ್ ಇನ್ನಿಲ್ಲ

13/02/2025, 21:34

ಮಂಗಳೂರು(reporterkarnataka.com): ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಇದರ 1991-93 ಅವಧಿಯ ಕೇಂದ್ರೀಯ ಅಧ್ಯಕ್ಷ, ಸಮಾಜ ಸೇವಕ, ಸಂಘಟನಾ ಚತುರ ಹಾಗೂ ನಿವೃತ್ತ ಶಿಕ್ಷಕ ಬೆಳ್ತಂಗಡಿ ನಿವಾಸಿ ಕಾಶ್ಮೀರ್ ಮಿನೇಜಸ್ (79 )
ಸವರು ಅಲ್ಪಕಾಲದ ಅಸೌಖ್ಯದಿಂದ ಫೆಬ್ರವರಿ 12ರಂದು ಬುಧವಾರ ನಿಧನರಾದರು.
ಉಜಿರೆಯ ರತ್ನಮಾನಸದ ಮುಖ್ಯ ಪಾಲಕರಾಗಿ 1972 ರಿಂದ 2012 ಕಾರ್ಯನಿರ್ವಹಿಸಿರುವ ಅವರು ಉಜಿರೆ ಶ್ರೀ ಧರ್ಮಸ್ಥಳ ಸೆಕೆಂಡರಿ ಶಾಲೆ, ಧರ್ಮಸ್ಥಳ ಎಸ್.ಡಿ.ಎಂ. ಹೈಸ್ಕೂಲ್ ನಲ್ಲಿ ಶಿಕ್ಷಕರಾಗಿ, ಎಸ್.ಡಿ.ಎಂ. ರೆಸಿಡೆನ್ಸಿಯಲ್ ಕಾಲೇಜಿನ ನಿರ್ದೇಶಕರಾಗಿ, ಕೃಷಿ ತಜ್ಞರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಮೃತರು ಪತ್ನಿ, ಇಬ್ಬರು ಮಕ್ಕಳು, ಮೊಮ್ಮಕ್ಕಳನ್ನು ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.
ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ್ ಸಭಾ ಸಂಘಟನೆಯಲ್ಲಿ ನಿಷ್ಟಾವಂತರಾಗಿ ಸೇವೆಯನ್ನು ಸಲ್ಲಿಸಿ ಸಂಘಟನೆ ಬಲಿಷ್ಠಗೊಳಿಸುವುದರೊಂದಿಗೆ ಅದರ ಅಭಿವೃದ್ಧಿಗೆ ಕಾರಣಕರ್ತರಾದ ಇವರ ನಿಧನಕ್ಕೆ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ ಕೇಂದ್ರೀಯ ಆಧ್ಯಾತ್ಮಿಕ ನಿರ್ದೇಶಕರಾದ ವಂದನೀಯ ಡಾ. ಜೆ.ಬಿ. ಸಲ್ಡಾನ್ಹಾ, ಕೇಂದ್ರೀಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್, ನಿಕಟ ಪೂರ್ವ ಅಧ್ಯಕ್ಷ ಸ್ಟ್ಯಾನಿ ಲೋಬೊ ಬಂಟ್ವಾಳ, ಮಾಜಿ ಅಧ್ಯಕ್ಷರಾದ ಎಲ್.ಜೆ. ಫೆರ್ನಾಂಡಿಸ್, ಜೆರಾಲ್ಡ್ ಡಿಕೋಸ್ತ ಹಾಗೂ ಎಲ್ಲಾ ಮಾಜಿ ಅಧ್ಯಕ್ಷರು, ಕೇಂದ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯರು ತೀವ್ರ ಸಂತಾಪವನ್ನು ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು