5:09 PM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಂಗ್ಳುರ್ ಕಥೊಲಿಕ್ ಸಭಾ ಕೇಂದ್ರೀಯ ಮಾಜಿ ಅಧ್ಯಕ್ಷ ಕಾಶ್ಮೀರ್ ಮಿನೇಜಸ್ ಇನ್ನಿಲ್ಲ

13/02/2025, 21:34

ಮಂಗಳೂರು(reporterkarnataka.com): ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಇದರ 1991-93 ಅವಧಿಯ ಕೇಂದ್ರೀಯ ಅಧ್ಯಕ್ಷ, ಸಮಾಜ ಸೇವಕ, ಸಂಘಟನಾ ಚತುರ ಹಾಗೂ ನಿವೃತ್ತ ಶಿಕ್ಷಕ ಬೆಳ್ತಂಗಡಿ ನಿವಾಸಿ ಕಾಶ್ಮೀರ್ ಮಿನೇಜಸ್ (79 )
ಸವರು ಅಲ್ಪಕಾಲದ ಅಸೌಖ್ಯದಿಂದ ಫೆಬ್ರವರಿ 12ರಂದು ಬುಧವಾರ ನಿಧನರಾದರು.
ಉಜಿರೆಯ ರತ್ನಮಾನಸದ ಮುಖ್ಯ ಪಾಲಕರಾಗಿ 1972 ರಿಂದ 2012 ಕಾರ್ಯನಿರ್ವಹಿಸಿರುವ ಅವರು ಉಜಿರೆ ಶ್ರೀ ಧರ್ಮಸ್ಥಳ ಸೆಕೆಂಡರಿ ಶಾಲೆ, ಧರ್ಮಸ್ಥಳ ಎಸ್.ಡಿ.ಎಂ. ಹೈಸ್ಕೂಲ್ ನಲ್ಲಿ ಶಿಕ್ಷಕರಾಗಿ, ಎಸ್.ಡಿ.ಎಂ. ರೆಸಿಡೆನ್ಸಿಯಲ್ ಕಾಲೇಜಿನ ನಿರ್ದೇಶಕರಾಗಿ, ಕೃಷಿ ತಜ್ಞರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಮೃತರು ಪತ್ನಿ, ಇಬ್ಬರು ಮಕ್ಕಳು, ಮೊಮ್ಮಕ್ಕಳನ್ನು ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.
ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ್ ಸಭಾ ಸಂಘಟನೆಯಲ್ಲಿ ನಿಷ್ಟಾವಂತರಾಗಿ ಸೇವೆಯನ್ನು ಸಲ್ಲಿಸಿ ಸಂಘಟನೆ ಬಲಿಷ್ಠಗೊಳಿಸುವುದರೊಂದಿಗೆ ಅದರ ಅಭಿವೃದ್ಧಿಗೆ ಕಾರಣಕರ್ತರಾದ ಇವರ ನಿಧನಕ್ಕೆ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ ಕೇಂದ್ರೀಯ ಆಧ್ಯಾತ್ಮಿಕ ನಿರ್ದೇಶಕರಾದ ವಂದನೀಯ ಡಾ. ಜೆ.ಬಿ. ಸಲ್ಡಾನ್ಹಾ, ಕೇಂದ್ರೀಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್, ನಿಕಟ ಪೂರ್ವ ಅಧ್ಯಕ್ಷ ಸ್ಟ್ಯಾನಿ ಲೋಬೊ ಬಂಟ್ವಾಳ, ಮಾಜಿ ಅಧ್ಯಕ್ಷರಾದ ಎಲ್.ಜೆ. ಫೆರ್ನಾಂಡಿಸ್, ಜೆರಾಲ್ಡ್ ಡಿಕೋಸ್ತ ಹಾಗೂ ಎಲ್ಲಾ ಮಾಜಿ ಅಧ್ಯಕ್ಷರು, ಕೇಂದ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯರು ತೀವ್ರ ಸಂತಾಪವನ್ನು ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು