4:06 AM Tuesday6 - January 2026
ಬ್ರೇಕಿಂಗ್ ನ್ಯೂಸ್
ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್! ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ… Bangalore | ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: 153 ಎಕರೆ… ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ‘ಚಾರೊಳಿ’ 1000ದ ಸಂಭ್ರಮ: ಹಲವು ರಾಜ್ಯಗಳ ಕವಿಗಳು ಭಾಗಿ

28/07/2024, 17:36

ಮಂಗಳೂರು(reporterkarnataka.com): ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು 20 ವರ್ಷ ಪೂರೈಸಿದ ‘ಪಿಂಗಾರ’ ವಾರ ಪತ್ರಿಕೆಯ ಸಹಯೋಗದಲ್ಲಿ ‘ಚಾರೊಳಿ’ 1000 ದ ಸಂಭ್ರಮ ನಗರದ ಬಜ್ಜೋಡಿಯ ಸಂದೇಶ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್‌ ಮಾತನಾಡಿ ‘ಚಾರೊಳಿ’ ಎಂದರೆ ನಾಲ್ಕು ಸಾಲುಗಳ ಸಾಹಿತ್ಯ. ಈ ನಾಲ್ಕು ಸಾಲುಗಳ ಸಾಹಿತ್ಯದಲ್ಲಿ ಎಲ್ಲಾ ವಿಷಯಗಳನ್ನು ಮನ ತಟ್ಟುವಂತೆ ಮಾಡುವ ಸಾಹಿತ್ಯ ಜನರ ಮನೆ ಮಾತಗಿದೆ ಎಂದರು.
ಮುಖ್ಯ ಅತಿಥಿಯಾಗಿದ್ದ ಮಂಗಳೂರು ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ಹಾಗೂ ಕೊಂಕಣಿ ಅಕಾಡೆಮಿಯ ಮಾಜಿ ಅಧ್ಯಕ್ಷ ರೋಯ್‌ ಕ್ಯಾಸ್ಟಲಿನೊ ಅವರು ಶುಭ ಹಾರೈಸಿದರು. ಅತಿಥಿಗಳಾಗಿ ರಾಹುಲ್‌ ಜಾಹೀರಾತು ಸಂಸ್ಥೆಯ ಮಾಲಕ ಟೈಟಸ್‌ ನೊರೊನ್ಹಾ, ನವೀನ್ ನಾಯಕ್‌, ಫೋರ್‌ ವಿಂಡ್ಸ್ ಜಾಹೀರಾತು ಸಂಸ್ಥೆಯ ನಿರ್ದೇಶಕ ಎಲಿಯಾಸ್‌ ಫೆರ್ನಾಂಡಿಸ್‌ ಅವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕೊಂಕಣಿ ಹಾಗೂ ಇತರ ಭಾಷೆಗಳಲ್ಲಿ ಹಲವಾರು ಸಾಹಿತ್ಯ ಕೃತಿ ರಚಿಸಿದ ಕೊಂಕಣಿ ಕವಿ ರಿಚಾರ್ಡ್‌ ಲಸ್ರಾದೊ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕೇರಳ, ಗೋವಾ, ಆಂಧ್ರ ಹಾಗೂ ಮಹಾರಾಷ್ಟ್ರ ರಾಜ್ಯಗಳಿಂದ ಹಲವು ಮಂದಿ ಕವಿಗಳು ಹಾಗೂ ಚಾರೊಳಿಯಲ್ಲಿ ನಿಪುಣರಾದ ಸಾಹಿತಿಗಳು ಭಾಗವಹಿಸಿದ್ದರು.
ಅಖಿಲ ಭಾರತೀಯ ಕೊಂಕಣಿ ಚಾರೊಳಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಗೂ ಪಿಂಗಾರ ಪತ್ರಿಕೆಯ ಸಂಪಾದಕ ರೈಮಂಡ್ ಡಿ’ಕುನ್ಹಾ ಸ್ವಾಗತಿಸಿದರು. ರಿಯಾನಾ ಡಿ’ಕಿನ್ಹಾ ಮತ್ತು ಅರವಿಂದ ಶಾನುಬೋಗ್‌ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು