8:25 AM Saturday10 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ‘ಚಾರೊಳಿ’ 1000ದ ಸಂಭ್ರಮ: ಹಲವು ರಾಜ್ಯಗಳ ಕವಿಗಳು ಭಾಗಿ

28/07/2024, 17:36

ಮಂಗಳೂರು(reporterkarnataka.com): ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು 20 ವರ್ಷ ಪೂರೈಸಿದ ‘ಪಿಂಗಾರ’ ವಾರ ಪತ್ರಿಕೆಯ ಸಹಯೋಗದಲ್ಲಿ ‘ಚಾರೊಳಿ’ 1000 ದ ಸಂಭ್ರಮ ನಗರದ ಬಜ್ಜೋಡಿಯ ಸಂದೇಶ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್‌ ಮಾತನಾಡಿ ‘ಚಾರೊಳಿ’ ಎಂದರೆ ನಾಲ್ಕು ಸಾಲುಗಳ ಸಾಹಿತ್ಯ. ಈ ನಾಲ್ಕು ಸಾಲುಗಳ ಸಾಹಿತ್ಯದಲ್ಲಿ ಎಲ್ಲಾ ವಿಷಯಗಳನ್ನು ಮನ ತಟ್ಟುವಂತೆ ಮಾಡುವ ಸಾಹಿತ್ಯ ಜನರ ಮನೆ ಮಾತಗಿದೆ ಎಂದರು.
ಮುಖ್ಯ ಅತಿಥಿಯಾಗಿದ್ದ ಮಂಗಳೂರು ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ಹಾಗೂ ಕೊಂಕಣಿ ಅಕಾಡೆಮಿಯ ಮಾಜಿ ಅಧ್ಯಕ್ಷ ರೋಯ್‌ ಕ್ಯಾಸ್ಟಲಿನೊ ಅವರು ಶುಭ ಹಾರೈಸಿದರು. ಅತಿಥಿಗಳಾಗಿ ರಾಹುಲ್‌ ಜಾಹೀರಾತು ಸಂಸ್ಥೆಯ ಮಾಲಕ ಟೈಟಸ್‌ ನೊರೊನ್ಹಾ, ನವೀನ್ ನಾಯಕ್‌, ಫೋರ್‌ ವಿಂಡ್ಸ್ ಜಾಹೀರಾತು ಸಂಸ್ಥೆಯ ನಿರ್ದೇಶಕ ಎಲಿಯಾಸ್‌ ಫೆರ್ನಾಂಡಿಸ್‌ ಅವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕೊಂಕಣಿ ಹಾಗೂ ಇತರ ಭಾಷೆಗಳಲ್ಲಿ ಹಲವಾರು ಸಾಹಿತ್ಯ ಕೃತಿ ರಚಿಸಿದ ಕೊಂಕಣಿ ಕವಿ ರಿಚಾರ್ಡ್‌ ಲಸ್ರಾದೊ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕೇರಳ, ಗೋವಾ, ಆಂಧ್ರ ಹಾಗೂ ಮಹಾರಾಷ್ಟ್ರ ರಾಜ್ಯಗಳಿಂದ ಹಲವು ಮಂದಿ ಕವಿಗಳು ಹಾಗೂ ಚಾರೊಳಿಯಲ್ಲಿ ನಿಪುಣರಾದ ಸಾಹಿತಿಗಳು ಭಾಗವಹಿಸಿದ್ದರು.
ಅಖಿಲ ಭಾರತೀಯ ಕೊಂಕಣಿ ಚಾರೊಳಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಗೂ ಪಿಂಗಾರ ಪತ್ರಿಕೆಯ ಸಂಪಾದಕ ರೈಮಂಡ್ ಡಿ’ಕುನ್ಹಾ ಸ್ವಾಗತಿಸಿದರು. ರಿಯಾನಾ ಡಿ’ಕಿನ್ಹಾ ಮತ್ತು ಅರವಿಂದ ಶಾನುಬೋಗ್‌ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು